Site icon Suddi Belthangady

ವಾಣಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸ್ವಯಂ ಸೇವಕ ತೇಜಸ್ ಇವರು ನ.22 ರಿಂದ 28ರ ತನಕ ಕಾರವಾರದ ಕರ್ನಾಟಕ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿವಿಧ ಸ್ವಚ್ಛತಾ ಅಭಿಯಾನಗಳು, ವ್ಯಕ್ತಿತ್ವ ವಿಕಸನ ತರಬೇತಿ, ಈ ಬಾರಿಯ ಎನ್.ಎಸ್.ಎಸ್ ವಾರ್ಷಿಕ ಶಿಬಿರದಲ್ಲಿ ಭಾಗವಹಿಸಿ, ಸಾಂಸ್ಕೃತಿಕವಾಗಿ ಪರಿಣತಿಯನ್ನು ಹೊಂದಿದ್ದಾನೆ.ಅಲ್ಲದೇ ಉತ್ತಮ ಯಕ್ಷಗಾನ ವೇಷದಾರಿ, ಜನಪದ ಹಾಡುಗಳ ಹಾಡುಗಾರ, ನಾಯಕತ್ವ ಗುಣ ಮೈಗುಡಿಸಿಕೊಂಡು ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಆಯ್ಕೆಯಾಗಿರುವುದು ಕಾಲೇಜಿನ ಗೌರವ ಹೆಚ್ಚಿಸಿದ್ದಾನೆ.

Exit mobile version