ಇಂದಬೆಟ್ಟು: ಶತಾಯಿಷಿ ಮತದಾರ ಬಂಗಾಡಿ ಅರಮನೆಯ ಬಿ.ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ

0

ಇಂದಬೆಟ್ಟು: ಶತಾಯುಷಿ ಮತದಾರರನ್ನು ಮತದಾನದಲ್ಲಿ ಗರಿಷ್ಠ ಭಾಗವಹಿಸುವಿಕೆಯಲ್ಲಿ ಖಚಿತ ಪಡಿಸಿಕೊಳ್ಳಲು ಭಾರತ ಚುನಾವಣಾ ಆಯೋಗವು ಆದೇಶ ನೀಡಿದ್ದು, ಈ ಆದೇಶದಂತೆ ಇಂದಬೆಟ್ಟು ಗ್ರಾಮದ ಶತಾಯುಷಿ ಬಂಗಾಡಿ ಅರಮನೆಯ ಬಿ.ರವಿರಾಜ್ ಬಲ್ಲಾಳ್ ರವರನ್ನು ಇಂದಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಬಂಗಾಡಿ ಅರಮನೆಗೆ ಭೇಟಿ ನೀಡಿ ಪಂಚಾಯತ್ ಅಧ್ಯಕ್ಷೆ ಆಶಾಲತಾ, ಮಾಜಿ ಅಧ್ಯಕ್ಷ ಅನಂದ ಅಡಿಲು, ಪಂಚಾಯತ್ ಸದಸ್ಯ ಶ್ರೀಕಾಂತ್ ಎಸ್ ಇಂದಬೆಟ್ಟು, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ಗೌರವಯುತವಾಗಿ ಅಭಿನಂದಿಸಿ, ಸನ್ಮಾನಿಸಿ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್, ನವೀನ್ ಜೈನ್ ಇಂದಬೆಟ್ಟು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here