Site icon Suddi Belthangady

ಕರಾಟೆ ಸ್ಪರ್ಧೆಯಲ್ಲಿ ಎಲ್.ಸಿ.ಆರ್ ವಿದ್ಯಾರ್ಥಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಕ್ಯಪದವು: ಎಲ್ ಸಿ ಆರ್ ವಿದ್ಯಾರ್ಥಿ ಜೀವಿತ್ ಪಿ ಹತ್ತನೇ ತರಗತಿ ಇವರು 17ರ ವಯೋಮಾನದ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ತಾಲೂಕು, ಜಿಲ್ಲಾ ಹಾಗೂ ನವೆಂಬರ್ 21ಮತ್ತು 22 ರಂದು ನೆಹರು ಕ್ರೀಡಾಂಗಣ ಶಿವಮೊಗ್ಗ ನಗರದಲ್ಲಿ ನಡೆದ ರಾಜ್ಯ ಮಟ್ಟದ ಪಂದ್ಯಾಟದಲ್ಲಿ ಪ್ರತಿನಿಧಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ಇವರಿಗೆ ಆಡಳಿತ ‌ಮಂಡಳಿ, ಪ್ರಾಂಶುಪಾಲರು, ಸಂಯೋಜಕರು ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗ, ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗಳು, ವಿದ್ಯಾರ್ಥಿ ವರ್ಗ ಸಹಕರಿಸಿದ್ದಾರೆ.

Exit mobile version