ಬೆಳ್ತಂಗಡಿ: ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ಅವರು ಅಧಿಕಾರ ಸ್ವೀಕರಿಸಿದರು.

ಪೃಥ್ವಿ ಸಾನಿಕಂ ಅವರು ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಆಗಿ 2022ರ ಜೂನ್ 28ರಿಂದ 2023ರ ಫೆಬ್ರವರಿ 2ರವರೆಗೆ ಕಾರ್ಯ ನಿರ್ವಹಿಸಿದ್ದರು.ಬಳಿಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹರಿಹರಕ್ಕೆ ವರ್ಗಾವಣೆಗೊಂಡಿದ್ದರು.ಇವರ ವರ್ಗಾವಣೆಯ ಬಳಿಕ ಸಚ್ಚಿದಾನಂದ ಎಸ್. ಕುಚನೂರು ಬಳಿಕ ಟಿ.ಸುರೇಶ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಮತ್ತೆ ಬೆಳ್ತಂಗಡಿ ತಾಲೂಕಿಗೆ ಪೃಥ್ವಿ ಸಾನಿಕಂ ಅವರು ವರ್ಗಾವಣೆಗೊಂಡಿದ್ದಾರೆ.

ಪೃಥ್ವಿ ಸಾನಿಕಂ ಅವರು ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಮತ್ತು ದಂಡಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.ನಿರ್ಗಮಿತ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ಅವರು ಪೃಥ್ವಿ ಸಾನಿಕಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

LEAVE A REPLY

Please enter your comment!
Please enter your name here