ಡಿ.2: ಯಕ್ಷ ಸಂಭ್ರಮ-2023- ಆಮಂತ್ರಣ ಪತ್ರಿಕೆ ಬಿಡುಗಡೆ

0

ಬೆಳ್ತಂಗಡಿ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 02  ಶನಿವಾರ  ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥ ಬೀದಿಯಲ್ಲಿ ನಡೆಯಲಿರುವ ಯಕ್ಷ ಸಂಭ್ರಮ- 2023 ಇದರ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ರವರು ನ.23 ಗುರುವಾರ  ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಪ್ರ.ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ, ಗೌರವ ಸಲಹೆಗಾರರಾದ ಭುಜಬಲಿ ಧರ್ಮಸ್ಥಳ, ರಘುರಾಮ್ ಶೆಟ್ಟಿ ಉಜಿರೆ, ಕೋಶಾಧಿಕಾರಿ ಆದರ್ಶ್ ಜೈನ್ ಗುರುವಾಯನಕೆರೆ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ, ಸಲಹೆಗಾರರಾದ ವಸಂತ ಸುವರ್ಣ ಲಾಯಿಲ, ಮಂಜುನಾಥ ಶೆಟ್ಟಿ ನಿಡಿಗಲ್, ಕೃಷ್ಣ ಕುಮಾರ ಪಂಜಿರ್ಪು ಜಗದೀಶ್ ಕನ್ನಾಜೆ, ವಿಶ್ವನಾಥ ಶೆಟ್ಟಿ, ರಸರಾಗ ಉಜಿರೆ,ತುಕರಾಮ್, ಪ್ರಸಾದ್ ಶೆಟ್ಟಿ ಎಣಿಂಜೆ, ಲೀಲಾ ಶೆಟ್ಟಿ, ವನಿತಾ. ವಿ. ಶೆಟ್ಟಿ, ವಿನಯ ಸಿ. ರೈಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here