ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಿಗೆ ಶುಚಿತ್ವ, ಆರೋಗ್ಯದ ಕುರಿತು ಜಾಗೃತಿ ಕಾರ್ಯಕ್ರಮ

0

ದಿನಾಂಕ : ನ.24ರಂದು ಉಜಿರೆಯ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಜಾಗೃತಿ ಶಿಬಿರ ಏರ್ಪಡಿಸಲಾಯಿತು.

ಶಾಲಾ ಪ್ರಾಂಶುಪಾಲರಾದ ವಂ! ಫಾ! ವಿಜಯ್ ಲೋಬೊರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹದಿಹರೆಯದ ಮುಟ್ಟಿನ ಸಮಸ್ಯೆ ಹಾಗೂ ಅದರ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಲು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದಂತಹ ಪತ್ರಾವೂ ಹಾಸ್ಪಿಟಲ್ ಪುತ್ತೂರು ಇದರ ಡಾ! ಜ್ವಾನ ತೇಜಸ್ವಿನಿ ಸಿಕ್ವೇರಾ ಇವರು ಹೆಣ್ಣು ಮಕ್ಕಳ ಜೀವನದಲ್ಲಿ ಬದಲಾವಣೆಯೆಂಬುವುದು ಸಹಜ ಪ್ರಕ್ರಿಯೆ.ನಮ್ಮ ದೇಹವನ್ನು ಅರ್ಥೈಯಿಸಿಕೊಂಡು ಶುಚಿತ್ವ ಮತ್ತು ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ನಿರೂಪಣೆಯನ್ನು ಪ್ರಶಿಕ್ಷಣಾರ್ಥಿ ಆಯಿಷತ್ ತಸ್ರೀನಾ ಇವರು ನಿರ್ವಹಿಸಿ, ಸ್ವಾಗತವನ್ನು ಐಶ್ವರ್ಯಾ ಇವರು ಕೋರಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರೂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here