ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

0

ಕಲ್ಮಂಜ: ನ.25ರಂದು ಕಲ್ಮಂಜ ಗ್ರಾಮದ ಪಜಿರಡ್ಕ- ಮದ್ಮಲ್ ಕಟ್ಟೆ ಅಂಗನವಾಡಿ ಕೇಂದ್ರಕ್ಕೆ ಮಕ್ಕಳ ದಿನಾಚರಣೆ ಪ್ರಯುಕ್ತ ಟೀಮ್ ದೇವರಗುಡ್ಡೆ ವತಿಯಿಂದ ಕುರ್ಚಿ ವಿತರಣೆ ಮಾಡಿದರು.

15-20 ಮಕ್ಕಳು ಇರುವ ಅಂಗನವಾಡಿ ಕೇಂದ್ರ ಇದಾಗಿದ್ದು, ಅನೇಕ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ ಮತ್ತು ಮಳೆಗಾಲದಲ್ಲಿ ನೀರು ಸೋರುವ ಸ್ಥಿತಿ ಈ ಅಂಗನವಾಡಿ ಕೇಂದ್ರದ್ದಾಗಿದೆ.ಹಾಗೆಯೇ ಅಂಗನವಾಡಿ ಕೇಂದ್ರಕ್ಕೆ ಹೊಸ ಕಟ್ಟಡದ ಬೇಡಿಕೆ ಅನೇಕ ವರ್ಷಗಳಿಂದ ಕೇಳಿಬರುತ್ತಿದ್ದರು ಯಾವುದೇ ಸರಕಾರ ಈ ಕಡೆ ಗಮನ ಹರಿಸದಿರುವುದು ಬೇಸರದ ಸಂಗತಿ ಎಂಬುದು ಊರವರ ಅಭಿಪ್ರಾಯವಾಗಿದೆ.

ಹೆಚ್ಚಾಗಿ ಇಂಗ್ಲಿಷ್ ಶಿಕ್ಷಣಕ್ಕಾಗಿ ಮರುಹೋಗುತ್ತಿರುವ ಈ ಕಾಲಘಟ್ಟದಲ್ಲಿ ಅಂಗನವಾಡಿ ಕೇಂದ್ರಗಳನ್ನು ಉಳಿಸಿ ಬೆಳೆಸುವುದು ಸರಕಾರದ ಮತ್ತು ಊರವರ ಕರ್ತವ್ಯವಾಗಿದೆ.

ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ರೇಖಾ, ಆಶಾ ಕಾರ್ಯಕರ್ತೆ ವಿಜಯಾ, ಅಂಗನವಾಡಿ ಕಾರ್ಯಕರ್ತೆ ಜಯಶ್ರೀ, ಸಹಾಯಕಿ ಶ್ರೀದೇವಿ, ಟೀಮ್ ದೇವರಗುಡ್ಡೆಯ ಹರೀಶ್ ಗೌಡ, ಸಚಿನ್ ಗೌಡ ಕಲ್ಮಂಜ, ಶಿವಪ್ರಸಾದ್, ಸಂಧ್ಯಾ, ಪುಷ್ಪವತಿ, ಮಕ್ಕಳ ಪೋಷಕರು, ಊರವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here