Site icon Suddi Belthangady

ನಾಳ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ನ್ಯಾಯತರ್ಪು: ನಾಳ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ನ.25 ರಂದು ಜರುಗಿತು.

ಪುಟಾಣಿ ಮಕ್ಕಳು ಕೇಕ್ ಕತ್ತರಿಸುವ ಮೂಲಕ ನವಂಬರ್ ತಿಂಗಳಲ್ಲಿ ಹುಟ್ಟಿದ ಮಕ್ಕಳ ಸಾಮೂಹಿಕ ಆಚರಣೆ ನಡೆಯಿತು.

ರಕ್ತೇಶ್ವರಿಪದವು ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ಅಧ್ಯಕ್ಷತೆ ವಹಿಸಿದ್ದರು.ಎರುಕಡಪ್ಪು ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್, ಸ್ಥಳೀಯ ಹಿರಿಯರಾದ ಕಮಲ ನ್ಯಾಯತರ್ಪು ಗ್ರಾಮದ ಆಶಾ ಕಾರ್ಯಕರ್ತೆಯರಾದ ಶಶಿಕಲಾ ಓಬಯ್ಯ ಗೌಡ, ಪೂರ್ಣಿಮಾ ವಿಜಯ ಕುಮಾರ್, ಮಕ್ಕಳು ಪೋಷಕರಾದ ಶೋಭ ಉಮೇಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಿದರು.ಮಕ್ಕಳು ವಿವಿಧ ರೀತಿಯ ಅಭಿನಯ ನೃತ್ಯ ಮಾಡಿದರು.
ಬಾಲವಿಕಾಸ ಸಮಿತಿ ಪದಾಧಿಕಾರಿಗಳು, ಮಕ್ಕಳ ಪೋಷಕರು ಹಾಗೂ ಸಹಾಯಕಿ ಮೋಹಿನಿ ಬಾಗವಹಿಸಿ ಸಹಕರಿಸಿದರು.ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಸ್ವಾಗತಿಸಿ, ಧನ್ಯವಾದವಿತ್ತರು.

Exit mobile version