ಮುಂಡಾಜೆ ಕಾಲೇಜಿನಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಆರೋಗ್ಯ ಮಾಹಿತಿ ಕಾರ್ಯಕ್ರಮ

0

ಮುಂಡಾಜೆ ಪದವಿ ಪೂರ್ವ ಕಾಲೇಜು, ಮುಂಡಾಜೆ ಇಲ್ಲಿ ನ.27ರಂದು ಜೂನಿಯರ್ ರೆಡ್ ಕ್ರಾಸ್ ಇದರ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಹೃದಯದ ಸಂರಕ್ಷಣೆ ಮತ್ತು ರಕ್ತದಾನದ ಮಹತ್ವ ಎಂಬ ವಿಷಯದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಕೋಶಾಧಿಕಾರಿ ಹಾಗೂ ಆರೋಗ್ಯ ಇಲಾಖಾ ಶುಶ್ರೂಷಕ ಅಧಿಕಾರಿ ಸುಭಾಷಿಣಿ ರೈ ಇವರು ಆಗಮಿಸಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಜಾಲಿ ಒ ಎ ಇವರು ವಹಿಸಿಕೊಂಡಿದ್ದರು. ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಪುರುಷೋತ್ತಮ ಶೆಟ್ಟಿ ಇವರು ಪ್ರಸ್ತಾಪಿಸಿ ಸ್ವಾಗತಿಸಿದರು.ವಿದ್ಯಾರ್ಥಿನಿಯರಾದ ವರ್ಷ ಮತ್ತು ತುಳಸಿ ಇವರು ಪ್ರಾರ್ಥಿಸಿದರು.ಲತೇಶ್ ಇವರು ಧನ್ಯವಾದವಿತ್ತರು.ವಿದ್ಯಾರ್ಥಿನಿ ಪಲ್ಲವಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here