Site icon Suddi Belthangady

ಪುಂಜಾಲಕಟ್ಟೆ ಸ.ಪ.ಪೂ ಕಾಲೇಜಿನಲ್ಲಿ ವಾರ್ಷಿಕೋತ್ಸವ-ಮನಸ್ಸನ್ನು ಶಕ್ತಿಯುತವಾಗಿರಿಸುವುದಲ್ಲೇ ಸುಂದರ ಜೀವನದ ಮರ್ಮ ಅಡಗಿದೆ: ಶಾಸಕ ಹರೀಶ್ ಪೂಂಜ

ಪುಂಜಾಲಕಟ್ಟೆ: ಕೆ.ಪಿ.ಎಸ್ ಪುಂಜಾಲಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಕಾಲೇಜು ವಾರ್ಷಿಕೋತ್ಸವವು ನ.21ರಂದು ಕಾಲೇಜು ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಲು ಮನಸ್ಸನ್ನು ಶಕ್ತಿಯುತಗೊಳಿಸಬೇಕೆಂದು ಹಿತವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಲೇಡಿಗೋಶನ್ ಆಸ್ಪತ್ರೆಯ ಮುಖ್ಯ ಅಧೀಕ್ಷಕ ಡಾ.ದುರ್ಗಾಪ್ರಸಾದ್ ಎಂ.ಆರ್. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಜೀವನದಲ್ಲಿ ಕಷ್ಟದ ಅನುಭವ ಪಡೆದಷ್ಟು ಹೆಚ್ಚು ಎತ್ತರಕ್ಕೆ ಏರುತ್ತಿರಿ ಎಂದು ಅನುಭವದ ಮಾತುಗಳಾಡಿದರು.

ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಡಾ|ಶರತ್ ಕುಮಾರ್, ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಸುಕುಮಾರ್ ಜೈನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿವಿಧ ಬಹುಮಾನಗಳನ್ನು ವಿತರಣೆ ಮಾಡಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ, ಕೆ.ಪಿ.ಎಸ್ ನ ಮುಖ್ಯೋಪಾದ್ಯಾಯ ಉದಯ್ ಕುಮಾರ್ ಮತ್ತು ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.ಪಂಚಾಯತ್ ಸದಸ್ಯ ಹನೀಫ್ ಭಾಗವಹಿಸಿದ್ದರು.ಮಡಂತ್ಯಾರು ಪಂಚಾಯತ್ ಮಾಜಿ ಅಧ್ಯಕ್ಷೆ ಶಶಿಪ್ರಭಾ ಉಪಸ್ಥಿತರಿದ್ದರು.ಹಾಲಿ ಅಧ್ಯಕ್ಷೆ ರೂಪ ನವೀನ್ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜು ಪ್ರಾಂಶುಪಾಲರು ಡಾ.ಸರೋಜಿನಿ ಆಚಾರ್ ಸ್ವಾಗತಿಸಿದರು.ಜೀವಶಾಸ್ತ್ರ ಉಪನ್ಯಾಸಕರಾದ ಜಯಶ್ರೀ ಕೆ.ಏನ್ ವರದಿ ವಾಚಿಸಿದರು.ಉಪನ್ಯಾಸಕರಾದ ತಾಹೀರ ಬಾನು ವಂದಿಸಿದರು.ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

Exit mobile version