ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಭವ್ಯ ಸ್ವಾಗತ

0

ಬೆಳ್ತಂಗಡಿ: ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯು ಪುತ್ತೂರಿಗೆ ತಲುಪಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿ ಗುರುವಾಯನಕೆರೆ ಮಂಡಲದ ಪರವಾಗಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ನಾಳದಲ್ಲಿ ಮಂತ್ರಾಕ್ಷತೆಯನ್ನು ಸ್ವೀಕರಿಸಲಾಯಿತು.

ಬಳಿಕ ಉಜಿರೆ ಬೆಳಾಲು ಕ್ರಾಸ್ ನಿಂದ ಜನಾರ್ದನ ದೇವಸ್ಥಾನದವರೆಗೆ ಭವ್ಯವಾದ ಶೋಭಯಾತ್ರೆಯು ಚೆಂಡೆ, ಭಜನೆ, ಸುಡುಮದ್ದು, ಮಂಗಳವಾದ್ಯದೊಂದಿಗೆ ಸ್ವಾಗತಿಸಲಾಯಿತು.ವಿಶ್ವಹಿಂದೂ ಪರಿಷತ್ ಭಜರಂಗದಳ ವತಿಯಿಂದ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು, ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here