ಡಿ.2: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

0

ಗುರುವಾಯನಕೆರೆ: ದೊಂಪದಬಲಿ ಉತ್ಸವ ಸಮಿತಿ ಪಿಲಿಚಾಮುಂಡಿಕಲ್ಲು ಇದರ ಆಶ್ರಯದಲ್ಲಿ ಡಿ.2ರಂದು ಶ್ರೀ ಪಿಲಿಚಾಮುಂಡಿ ದೈವದ ದೊಂಪದಬಲಿ ಉತ್ಸವ ಪಿಲಿಚಾಮುಂಡಿಕಲ್ಲಿನಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಸೋಮಶೇಖರ ದೇವಸ್ಯ ತಿಳಿಸಿದ್ದಾರೆ.

ಸಂಜೆ 5 ಗಂಟೆಗೆ ಪಾಡ್ಯಾರುಬೀಡು ಮನೆಯಿಂದ ದೈವದ ಭಂಡಾರವನ್ನು ವೈಭವದ ಮೆರವಣಿಗೆ ಮೂಲಕ ಪಿಲಿಚಾಮುಂಡಿಕಲ್ಲಿಗೆ ತರಲಾಗುತ್ತದೆ.

ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಲಿದೆ.ರಾತ್ರಿ ಶ್ರೀ ಪಿಲಿಚಾಮುಂಡಿ ದೈವದ ದೊಂಪದಬಲಿ ನಡೆಯಲಿದೆ.

ದೊಂಪದಬಲಿ ಉತ್ಸವ ಸಮಿತಿ ಅಧ್ಯಕ್ಷ ಸೋಮಶೇಖರ್, ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರುಬೀಡು, ಶ್ರೀನಿವಾಸ ಅಸ್ರಣ್ಣ ಮೂಡುಮನೆ, ಎ.ರಾಜಶೇಖರ ಶೆಟ್ಟಿ ಚಾವಡಿ ನಾಯಕರು ಅಳದಂಗಡಿ ಅರಮನೆ, ಪ್ರಧಾನ ಕಾರ್ಯದರ್ಶಿ ಜಿ.ನಾಗೇಶ್ ಮೂಲ್ಯ, ಉಪಾಧ್ಯಕ್ಷ ವಿತೇಶ್ ಬಂಗೇರ, ಕಾರ್ಯದರ್ಶಿ ಶೋಭಿತ್ ಜೈನ್, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ ನೇತೃತ್ವದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here