ಕಾಪಿನಡ್ಕ ಸ.ಕಿ.ಪ್ರಾ.ಶಾಲೆಯಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

0

ಬೆಳ್ತಂಗಡಿ: ಕಾಪಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಬೆಳೆಯರ ಬಳಗದ ರಜತ ಮಹೋತ್ಸವ ಆಂಗವಾಗಿ ಆಯೋಜಿಸಿದ್ದ 65ಕೆ.ಜಿ. ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಡಿ.2ರಂದು ಶಾಲಾ ಸ್ಥಾಪಕಾಧ್ಯಕ್ಷ ಹಾಗೂ ಗೆಳೆಯರ ಬಳಗದ ಗೌರವಾಧ್ಯಕ್ಷ ಕೆ.ವಸಂತ ಸಾಲ್ಯಾನ್ ಉದ್ಘಾಟನೆ ಮಾಡಿದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಅಧ್ಯಕ್ಷ ಸುರೇಶ್ ಪೂಜಾರಿ ಧ್ವಾಜರೋಹಣ ಮಾಡಿದರು.ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಧರ್ಣಪ್ಪ ಪೂಜಾರಿ, ಪ್ರಗತಿಪರ ಕೃಷಿಕರಾದ ಜಗದೀಶ ರೈ ಹಾನಿಂಜ, ಸುರೇಶ್ ಶೆಟ್ಟಿ ಕುರೆಲ್ಯ, ತಿಮ್ಮಪ್ಪ ಪೂಜಾರಿ ನಿಟ್ಟಡ್ಕ, ಅಳದಂಗಡಿ ವೈದ್ಯ ಡಾ.ಎಂ.ಎನ್.ತುಳುಪುಲೆ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಪತ್ರಕರ್ತ ಮನೋಹರ್ ಬಳಂಜ, ಉದ್ಯಮಿ ವಲೇರಿಯನ್ ಲೋಬೊ, ಗ್ರಾಮ ಪಂಚಾಯತ್ ಸದಸ್ಯೆ ಪದ್ಮಾವತಿ ಉಪಸ್ಥಿತರಿದ್ದರು.

ಗೆಳೆಯರ ಬಳಗದ ಅಧ್ಯಕ್ಷ ಪ್ರವೀಣ್, ಮುಖ್ಯಶಿಕ್ಷಕಿ ಶಾಂತಿವಾಸ್, ಶಿಕ್ಷಕರು, ಗೆಳೆಯರ ಬಳಗದ ಕಾರ್ಯದರ್ಶಿ ಲೋಕೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಕೇಶ್ ಪೂಜಾರಿ ಸಹಕರಿಸಿದರು.

LEAVE A REPLY

Please enter your comment!
Please enter your name here