Site icon Suddi Belthangady

ಪಿಲಿಚಾಮುಂಡಿ ಕಲ್ಲಿನಲ್ಲಿ ದೊಂಪದಬಲಿ ಉತ್ಸವ

ಗುರುವಾಯನಕೆರೆ: ದೊಂಪದಬಲಿ ಉತ್ಸವ ಸಮಿತಿ ಪಿಲಿಚಾಮುಂಡಿಕಲ್ಲು ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ಪಿಲಿಚಾಮುಂಡಿ ದೈವದ ದೊಂಪದಬಲಿ ಉತ್ಸವವು ಡಿ.2ರಂದು ಪಿಲಿಚಾಮುಂಡಿಕಲ್ಲಿನಲ್ಲಿ ವಿಜೃಂಭಣೆಯಿಂದ ನಡೆಯಿತು.

ಪಾಡ್ಯಾರುಬೀಡು ಮನೆಯಿಂದ ದೈವದ ಭಂಡಾರವನ್ನು ಭಕ್ತರ ಉಪಸ್ಥಿತಿಯಲ್ಲಿ ವೈಭವದ ಮೆರವಣಿಗೆ ಮೂಲಕ ಪಿಲಿಚಾಮುಂಡಿಕಲ್ಲಿಗೆ ತರಲಾಯಿತು . ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಬಳಿಕ ರಾತ್ರಿ ಶ್ರೀ ಪಿಲಿಚಾಮುಂಡಿ ದೈವದ ದೊಂಪದಬಲಿ ಉತ್ಸವ ನಡೆಯಿತು.

ಪರವೂರಗಳಿಂದಲೂ ಭಕ್ತರು ಭಾಗವಹಿಸಿ, ಶ್ರೀ ದೈವದ ಸಿರಿಮುಡಿ ಗಂಧಪ್ರಸಾದವನ್ನು ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ, ಅಳದಂಗಡಿಯ ಸತ್ಯ ದೇವತೆ ದೈವ ಸ್ಥಾನದ ಆಡಳಿತೆದಾರ ಶಿವಪ್ರಸಾದ್ ಅಜಿಲ, ಸುಕೇಶ್ ಕಡಂಬು, ದೊಂಪದಬಲಿ ಉತ್ಸವ ಸಮಿತಿಯ ಅಧ್ಯಕ್ಷ ಸೋಮಶೇಖರ್, ಗೌರವಾಧ್ಯಕ್ಷ ಪ್ರವೀಣ್‌ ಕುಮಾರ್ ಅಜ್ರಿ ಪಾಡ್ಯಾರುಬೀಡು, ಶ್ರೀನಿವಾಸ ಅಸ್ರಣ್ಣರು ಮೂಡುಮನೆ, ಎ.ರಾಜಶೇಖರ ಶೆಟ್ಟಿ ಚಾವಡಿ ನಾಯಕರು ಅಳದಂಗಡಿ ಅರಮನೆ, ಪ್ರಧಾನ ಕಾರ್ಯದರ್ಶಿ ಜಿ. ನಾಗೇಶ್ ಮೂಲ್ಯ, ಉಪಾಧ್ಯಕ್ಷ ವಿತೇಶ್ ಬಂಗೇರ, ಕಾರ್ಯದರ್ಶಿ ಶೋಭಿತ್ ಜೈನ್, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಭಕ್ತದಿ ಗಳು ಹಾಗೂ ಸಮಿತಿಯ ಸರ್ವಸದಸ್ಯರ ಭಾಗವಹಿಸಿ ಗಂಧ ಪ್ರಸಾದ ಸ್ವೀಕರಿಸಿದರು.

Exit mobile version