ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡೀರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು, ಎರಡು ಮಣ್ಣಿನ ಮಡಕೆ, ಒಂದು ಹಣತೆ ಪತ್ತೆ

0

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ದೇವಸ್ಥಾನಕ್ಕೆ ಹತ್ತಿರ ಕಡೀರ ಎಂಬಲ್ಲಿ ನಾಗನ ಸಾನಿಧ್ಯ ಇದ್ದು, ದೇವಸ್ಥಾನದಲ್ಲಿ 2 ವರ್ಷಗಳ ಹಿಂದೆ ಪ್ರಶ್ನೆ ಚಿಂತನೆಯಲ್ಲಿ ಕಂಡು ಬಂದಂತೆ ನಾಗತಂಬಿಲ ನೆರವೇರಿಸಲಾಯಿತು.ಆ ಜಾಗ ಸರಕಾರ ಎಂದು ತಿಳಿದು ಬಂದ ಕೂಡಲೇ ಜಿಲ್ಲಾಧಿಕಾರಿಗಳಿಗೆ ಜಾಗವನ್ನು ದೇವಸ್ಥಾನಕ್ಕೆ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು.ಅದರಂತೆ 5ಎಕ್ರೆ ಜಾಗವನ್ನು ಜಿಲ್ಲಾಧಿಕಾರಿಯವರು ಧಾರ್ಮಿಕ ದತ್ತಿ ಇಲಾಖೆಗೆ ಮಂಜೂರುಗೊಳಿಸಿ ದೇವಸ್ಥಾನಕ್ಕೆ ಹಸ್ತಾಂತರಿಸಿದರು.

ದೇವಸ್ಥಾನದ ವತಿಯಿಂದ 12 ದಿನಗಳ ಹಿಂದೆ ಅನುಜ್ಞ ಕಲಶ ನೆರವೇರಿಸಿ ಡಿ.2ರಂದು ಜೀರ್ಣೋದ್ದಾರ ಕೆಲಸ ಪ್ರಾರಂಭಿಸಿದರು.ಈ ಸಂದರ್ಭ ತಂಬೂರಿ ನಾಗ, ನಾಗ, ಕಾಡ್ಯಾ ನಾಗ ಎನ್ನುವ ನಾಲ್ಕು ನಾಗನ ಕಲ್ಲುಗಳು ಹಾಗೂ ನಾಗನ ಉಬ್ಬು ಚಿತ್ರಗಳನ್ನು ಹೊಂದಿದ ಗಟ್ಟಿಮುಟ್ಟಾದ 2 ಮಣ್ಣಿನ ಮಡಕೆ, 1 ಹಣತೆ ದೊರೆತಿದೆ.

ವಾಸ್ತು ತಜ್ಞ ಜಗನ್ನಿವಾಸ ರಾವ್ ರವರು ಇದು ಸುಮಾರು 500ವರ್ಷಗಳ ಹಿಂದಿನ ವಸ್ತುಗಳು ಹಾಗೂ ಇದು ಬಹಳ ಅಪರೂಪ ಎಂದು ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here