Site icon Suddi Belthangady

ಪ್ರತಿಭಾ ಕಾರಂಜಿ ಭರತ ನಾಟ್ಯ ಸ್ಪರ್ಧೆ-ಶ್ರೀ ಮಂ.ಆಂ.ಮಾ. ಶಾಲೆ ವಿದ್ಯಾರ್ಥಿನಿಯಾದ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

ಉಜಿರೆ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಹಂಸಿನಿ ಭಿಡೆ ಪ್ರತಿಭಾ ಕಾರಂಜಿಯ  ಭರತ ನಾಟ್ಯ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಜರಗಿದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಇವರು ಉಜಿರೆಯ ಪತ್ರಿಕಾ ವಿತರಕ, ಕಲ್ಮಂಜ ಧನಂಜಯ ಭಿಡೆ ಮತ್ತು ಚಿತ್ರಾ ಭಿಡೆ ದಂಪತಿಯ ಪುತ್ರಿ.

Exit mobile version