Site icon Suddi Belthangady

ಶಿರ್ಲಾಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ಧ್ವನಿ ಸುರುಳಿ ಬಿಡುಗಡೆ

ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ ಸಮಾರಂಭ ಡಿ.4 ರಂದು ನಡೆಯಿತು.

ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿಯ ನಿವೃತ್ತ ಉಪ ತಹಶೀಲ್ದಾರ್ ಜಿ.ಸೋಮೇ ಗೌಡ ವಹಿಸಿದ್ದರು.

ಅಳದಂಗಡಿ ಅಜಿಲ ಸೀಮೆಯ ಶಿವ ಪ್ರಸಾದ್ ಅಜಿಲ ಚಪ್ಪರ ಮುಹೂರ್ತ ನೆರವೇರಿಸಿದರು.ಆಮಂತ್ರಣ ಪತ್ರಿಕೆಯನ್ನು ನಿವೃತ್ತ ಯೋಧ ಬ್ರಿಜೇಶ್ ಚೌಟ ಬಿಡುಗಡೆಗೊಳಿಸಿದರು.ದೇವರ ಧ್ವನಿ ಸುರುಳಿಯನ್ನು ವೇಣೂರು ಪ್ರಾ.ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿಡುಗಡೆಗೊಳಿಸಿದರು.ಸಮಿತಿಯ ಪ್ರಮುಖರಾದ ಆನಂದ ಒಡಿಮಾರ್, ರವಿರಾಜ್, ಭಜನಾ ಮಂಡಳಿಯ ಅಧ್ಯಕ್ಷ ಸೋಮನಾಥ್ ಬಂಗೇರ ಬಳ್ಳಿದಡ್ಡ, ಮಹಿಳಾ ಸಮಿತಿ ಅಧ್ಯಕ್ಷೆ ಜಯಂತಿ ಮೋಹನ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಶಾಂತ್ ಪಾರೆಂಕಿ ಸ್ವಾಗತಿಸಿದರು, ವಿಶ್ವನಾಥ ಪೂಜಾರಿ ನಿರೂಪಿಸಿದರು.ಜೀರ್ಣೋದ್ದಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸ್ವಯಂ ಸೇವಕರು, ಭಕ್ತರು, ಊರವರು ಹಾಜರಿದ್ದರು

Exit mobile version