ಬಂಟರ ಸಂಘದವರಿಂದ ಬಂಟೋತ್ಸವ- ಕನ್ಯಾನ ಸದಾಶಿವ ಶೆಟ್ಟಿಯವರಿಂದ ಕಾರ್ಯಕ್ರಮ ಉದ್ಘಾಟನೆ

0

ಗುರುವಾಯನಕೆರೆ: ಪ್ರತಿಷ್ಠಿತ ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘ ಮತ್ತು ಮಹಿಳಾ ವಿಭಾಗ, ಯುವ ಬಂಟರ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಿ.3ರಂದು ಗುರುವಾಯನಕೆರೆಯ ಬಂಟರ ಭವನದಲ್ಲಿ ‘ಬಂಟೋತ್ಸವ’ ಕಾರ್ಯಕ್ರಮ ಅದ್ದೂರಿಯಾಗಿ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮುಂಬಾಯಿಯ ಹೇರಂಭಾ ಇಂಡಸ್ಟ್ರೀಸ್‌ನ ಸಿ.ಎಂ.ಡಿ ಸದಾಶಿವ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಹುಬ್ಬಳಿಯ ಉದ್ಯಮಿ, ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಆಡಳಿತ ಪಾಲುದಾರರಾದ ರಾಜೇಂದ್ರ ವಿ.ಶೆಟ್ಟಿ, ಹುಬ್ಬಳಿ, ಧಾರವಾಡ ಬಂಟರ ಸಂಘದ ಅಧ್ಯಕ್ಷರಾದ ಸುಗ್ಗಿ ಸುಧಾಕರ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರಯಾನೆ ನಾಡವರ ಸಂಘದ ಅಧ್ಯಕ್ಷ ಮುಂಡಾಡಿಗುತ್ತು ಜಯರಾಮ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು.

ಪೂಣೆಯ ಉದ್ಯಮಿಗಳಾದ ಕನಕ ಹಾಸ್ಪಿಟಾಲಿಟಿಯ ಪ್ರಶಾಂತ್ ಶೆಟ್ಟಿ, ಕುರ್ಕಾಲು ಹರೀಶ್ ಶೆಟ್ಟಿ ಉಜಿರೆ , ದಿನೇಶ್ ಶೆಟ್ಟಿ ಮತ್ತು ಪುಣೆ ತುಳುಕೂಟದ ಅಧ್ಯಕ್ಷರಾದ ದಿನೇಶ್ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ವೇದಿಕೆಯಲ್ಲಿ ಕಾರ್ಯದರ್ಶಿ ಸಂಜೀವ ಶೆಟ್ಟಿ ಕುಂಟಿನಿ, ಕೋಶಾಧಿಕಾರಿ ಕೆ.ಎನ್.ಆನಂದ ಶೆಟ್ಟಿ, ಉಪಾಧ್ಯಕ್ಷ ಕೆ.ವಿಠಲ ಶೆಟ್ಟಿ ಕೊಲ್ಲೊಟ್ಟು, ಜತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಯುವ ವಿಭಾಗದ ಅಧ್ಯಕ್ಷ ಸುಜಯ್ ಶೆಟ್ಟಿ ಬಾರ್ದಾಜೆ , ಮಹಿಳಾ ವಿಭಾಗದ ಶೋಭಾ ವಿ.ಶೆಟ್ಟಿ, ಹಾಗೂ ನಿದೇಶಕರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here