ನಾರಾವಿ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

0

ನಾರಾವಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಲಕ್ಷ ದೀಪೋತ್ಸವದ ಪ್ರಯುಕ್ತ ಪಾದಯಾತ್ರೆಯ ಪೂರ್ವಭಾವಿ ಸಭೆ ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ ರವರ ಅಧ್ಯಕ್ಷತೆಯಲ್ಲಿ ಡಿ.3ರಂದು ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಗುರುವಾಯನಕೆರೆ ಯೋಜನಾ ಕಛೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ, ಪ್ರಗತಿಪರ ಕೃಷಿಕ ರತ್ನಾಕರ ಭಟ್, ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಮಹಾವೀರ ಜೈನ್, ತಾಲೂಕು ಜನಜಾಗೃತಿ ಸಮಿತಿಯ ಸದಸ್ಯರಾದ ಸದಾನಂದ ಗೌಡ, ವಸಂತ ಗುಣನಿಲ, ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್, ನಾರಾವಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಉದಯ ಹೆಗ್ಡೆ, ನಾರಾವಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ದಯಾನಂದ ಪೂಜಾರಿ, ಒಕ್ಕೂಟದ ಅಧ್ಯಕ್ಷರುಗಳು ಮತು ಪದಾಧಿಕಾರಿಗಳು, ಗ್ರಾಮಸಮಿತಿ ಅಧ್ಯಕ್ಷರು ಹಾಗೂ
ಸದಸ್ಯರು, ಗ್ರಾ.ಪಂ. ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಸೇವಾಪ್ರತಿನಿಧಿ ಶಶಿಧರ್ ಕುಲಾಲ್ ಸ್ವಾಗತಿಸಿ ವಂದಿಸಿದರು.ವಲಯದ ಮೇಲ್ವಿಚಾರಕಿ ದಮಯಂತಿ ನಿರೂಪಿಸಿದರು.

LEAVE A REPLY

Please enter your comment!
Please enter your name here