ಜಿಲ್ಲಾ ಮಟ್ಟದ ಭಗವದ್ಗೀತಾ ಅಭಿಯಾನ-2023: ಧರ್ಮಸ್ಥಳ ಶ್ರೀ ಮಂ.ಅ.ಪ್ರೌಢಶಾಲೆಯ ತ್ರಿವೇಣಿ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಧರ್ಮಸ್ಥಳ: ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಭಗವದ್ಗೀತಾ ಸಮಿತಿ ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳು ಧರ್ಮಸ್ಥಳ-ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಡಿ.2ರಂದು ಗೀತಾ ಜಯಂತಿಯ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಭಗವದ್ಗೀತಾ ಅಭಿಯಾನ-2023 ಈ ಕಾರ್ಯಕ್ರಮದಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಕುಮಾರಿ ತ್ರಿವೇಣಿ ಜಿಲ್ಲಾ ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.

ರಸಪ್ರಶ್ನೆ ಸ್ಪರ್ಧೆಯಲ್ಲಿ ಭವಿಶ್ ತೃತೀಯ ಸ್ಥಾನ ಪಡೆದಿರುತ್ತಾನೆ.

ಶಾಲಾ ಮುಖ್ಯ ಶಿಕ್ಷಕ ಪದ್ಮರಾಜು ಎನ್ ಮಾರ್ಗದರ್ಶನ ನೀಡಿ, ಸಂಸ್ಕೃತ ಭಾಷಾ ಶಿಕ್ಷಕಿ ಭವ್ಯಾ ಹೆಗಡೆ ಸ್ಪರ್ಧಾ ತಯಾರಿ ಮತ್ತು ಸಂಯೋಜನೆಗೆ ಸಹಕರಿಸಿದ್ದಾರೆ.

LEAVE A REPLY

Please enter your comment!
Please enter your name here