ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜಮಾಬಂದಿ

0

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತಿನ 2022-23 ನೇ ಸಾಲಿನ ಜಮಾಬಂದಿ ಧರ್ಮಸ್ಥಳ ಗ್ರಾಮ ಪಂಚಾಯಿತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ವಿಮಲಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ನೋಡಲ್ ಅಧಿಕಾರಿಯಾಗಿ ಡಾ.ಆನಂದ ಐ.ಎ.ಎಸ್. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ನೆರವೇರಿಸಿಕೊಟ್ಟರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ.ಶ್ರೀನಿವಾಸ್ ರಾವ್ ಗ್ರಾಮದ ಅಭಿವೃದ್ಧಿ ಬಗ್ಗೆ ಕೈಗೊಂಡ ಕಾರ್ಯಕ್ರಮದ ಬಗ್ಗೆ ಸಭೆಗೆ ತಿಳಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ ಸ್ವಾಗತಿಸಿದರು , ಧರ್ಮಸ್ಥಳ ಗ್ರಾಮ ಪಂಚಾಯತ್ ಸಿಬ್ಬಂದಿ ಡಾ. ದೇವಿಪ್ರಸಾದ್ ಬೊಲ್ಮ ಜಮಾ ಬಂದಿ ವರದಿ ಮಂಡನೆ ಮಾಡಿದರು. ಗ್ರಾಮ ಪಂಚಾಯತಿ ಲೆಕ್ಕ ಸಹಾಯಕಿ ಪ್ರಮೀಳಾ ಜಮಾ ಖರ್ಚು ಇವರ ನೀಡಿದರು.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ರಾಮದ ಅಭಿವೃದ್ಧಿ ಬಗ್ಗೆ ಸೂಕ್ತ ಸಲಹೆ ಸೂಚನೆ ನೀಡಿದರು.ಪಂಚಾಯತಿ ಕಾರ್ಯದರ್ಶಿ ದಿನೇಶ್ ಎಮ್. ವಂದಿಸಿದರು

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಧಿಕಾರಿ ಬಿ. ಕುಸುಮಾಧರ, ಮಂಗಳೂರು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಮಹೇಶ್, ಇಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಅಭಿಯಂತರು ಹರ್ಷಿತ್, ನರೇಗಾ ಇಂಜಿನಿಯರ್ ಗೌತಮ್,ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು, ಗ್ರಾಮ ಪಂಚಾಯತ ಸಿಬ್ಬಂದಿ ವರ್ಗ,ಸಂಘ ಸಂಸ್ಥೆಯ ಪ್ರತಿನಿಧಿಗಳು, ಸಂಜೀವಿನಿ ಸಂಘದ ಪ್ರತಿನಿಧಿಗಳು ಉಪಚಿತರಿದ್ದರು.

LEAVE A REPLY

Please enter your comment!
Please enter your name here