Site icon Suddi Belthangady

ಕೊರಿಂಜ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ, ಸಮಿತಿ ರಚನೆ

ಕೊರಿಂಜ: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 15 ರಿಂದ 22.ರವರೆಗೆ ನಡೆಯುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ಬ್ರಹ್ಮಕಲಶೋತ್ಸವದ ಸಮಿತಿ ರಚನೆ ಕಾರ್ಯಕ್ರಮ ದೇವಸ್ಥಾನದ ವಠಾರ ದಲ್ಲಿ ನೇರವೇರಿತು.

ಕಾರ್ಯಕ್ರಮದ ಮುಂದಿನ ಕಾರ್ಯಯೋಜನೆ, ರೋಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಮಡoತ್ಯಾರು ವರ್ತಕರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರು ಸಭಾಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಸನ್ನ ಧರ್ಬೆ, ದಿನಕರ ಪೂಜಾರಿ ಕಡ್ತಿಲ, ಕೊರಿಂಜ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ದೇವಸ್ಥಾನದ ಪವಿತ್ರ ಪಾಣಿಗಳಾದ ಹರೀಶ್ ಭಟ್ ತಾಳಿಂಜ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ದಾಸಪ್ಪ ಗೌಡ ಕೋಡಿಯಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಣಿಯೂರು ವಲಯದ ಮೇಲ್ವಿಚಾರಕರಾದ ಶಿವಾನಂದ ಉಪಸ್ಥಿತರಿದ್ದರು.

ಯೋಗೀಶ್ ಪೂಜಾರಿ ಕಡ್ತಿಲ ರವರು ಪ್ರಾಸ್ತವಿಕ ಮಾತುಗಳನ್ನಾಡಿದರು.ಪ್ರಸಾದ್ ಕಡ್ತಿಲ ರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ವಿಜಯ ಕುಮಾರ್ ಕಲ್ಲಳಿಕೆ ಧನ್ಯವಾದವಿತ್ತರು.

Exit mobile version