ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

0

ಬೆಳ್ತಂಗಡಿ: ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕ ಬೆಳ್ತಂಗಡಿ, ಇದರ ಆಶ್ರಯದಲ್ಲಿ, ಧರ್ಮಸ್ಥಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಡಿ.2ರಂದು ಅಶೋಕನಗರದ ಸೂರ್ಯ ಸಭಾಭವನದಲ್ಲಿ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೆ ಕೊಕ್ಕಡ, ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶೇಖರ್ ವಿ ಧರ್ಮಸ್ಥಳ, ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಶೇಖರ್ ಡಿ ಧರ್ಮಸ್ಥಳ, ಹಾಗೂ ನಿಕಟಪೂರ್ವ ಕಾರ್ಯದರ್ಶಿ ಶರತ್ ಕೊಕ್ಕಡ, ಮುಂತಾದವರು ಉಪಸ್ಥಿತರಿದ್ದರು.ಸುಜಾತ ಇವರು ಅತಿಥಿಗಳನ್ನು ಸ್ವಾಗತಿಸಿದರು.

ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೆ ಕೊಕ್ಕಡ ಇವರು ಮಾತನಾಡುತ್ತಾ, ಡಿ.24ರಂದು ಮಂಗಳೂರಿನ ಪುರಭವನದಲ್ಲಿ ನಡೆಯುವ ಆದಿದ್ರಾವಿಡ ಸಮುದಾಯದ ರಾಜ್ಯ ಸಮಾವೇಶದಲ್ಲಿ ಸರಕಾರಕ್ಕೆ ಸಲ್ಲಿಸಲಿರುವ ಹಕ್ಕೊತ್ತಾಯದ ಅಂಶಗಳನ್ನು ಸಭೆಗೆ ವಿವರಿಸಿ, ಸಮಾವೇಶದ ಯಶಸ್ಸಿಗೆ ಎಲ್ಲರೂ ಸಂಘಟಿತರಾಗಿ ಸಹಕರಿಸಲು ಕರೆನೀಡಿದರು.

ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಗ್ರಾಮದ ಜಾತಿಬಾಂಧವರ ಜೊತೆ ಉತ್ತಮ ಭಾಂದವ್ಯ ಬೆಳೆಸಿಕೊಂಡು ಸಮುದಾಯಕ್ಕೆ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಮಾದರಿ ಗ್ರಾಮ ಘಟಕವಾಗಿ ರೂಪುಗೊಳ್ಳಲಿ ಎಂದು ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು.

ಆದಿದ್ರಾವಿಡ ಸಮಾಜ ಸೇವಾ ಸಂಘ ಬೆಳ್ತಂಗಡಿ, ಗ್ರಾಮ ಸಮಿತಿ ಧರ್ಮಸ್ಥಳದ ನೂತನ ಅಧ್ಯಕ್ಷರಾಗಿ ಗಣೇಶ್ ಡಿ, ಉಪಾಧ್ಯಕ್ಷರಾಗಿ ಸುಜಾತ, ಕಾರ್ಯದರ್ಶಿಯಾಗಿ ಶಶಿಕಲಾ, ಕೋಶಾಧಿಕಾರಿಯಾಗಿ ರಾಘವ ಎಸ್, ಇವರುಗಳು ಆಯ್ಕೆಯಾದರು.ಕೊನೆಯಲ್ಲಿ ಧರ್ಮಸ್ಥಳ ಗ್ರಾಮ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಸುರೇಶ್ ಇವರು ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here