Site icon Suddi Belthangady

ಡಿ.30: ವಿಶ್ವ ಹಿಂದೂ ಪರಿಷತ್, ಬಜರಂಗದಳ ರೆಖ್ಯ ಘಟಕದ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

ರೆಖ್ಯ: ವಿಶ್ವ ಹಿಂದೂ ಪರಿಷತ್, ಬಜರಂಗದಳ ರೆಖ್ಯ ಘಟಕದ ನೇತೃತ್ವದಲ್ಲಿ ಡಿಸೆಂಬರ್ 30 ಶನಿವಾರ ಸಂಜೆ 4.00 ಗಂಟೆಯಿಂದ ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ವ್ರತ ಕಲ್ಪೊಕ್ತ ಪೂಜೆ ಬ್ರಹ್ಮಶ್ರೀ ಪುರೋಹಿತ ನಾಗರಾಜ್ ಭಟ್ ಸುಳ್ಯ ಇವರ ಪೌರೋಹಿತ್ಯದಲ್ಲಿ ನಡೆಯಲಿದೆ ಮತ್ತು ಸಂಜೆ 7.00 ಗಂಟೆಯಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಭಾಷಣಗಾರರಾಗಿ ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕ ರವರು ಭಾಗವಹಿಸಲಿದ್ದಾರೆ ಮತ್ತು ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ ಮತ್ತು ಬಜರಂಗದಳ ರಾಜ್ಯ ಕಾರ್ಯಕಾರಣಿ ಸದಸ್ಯ ರಘು ಸಕಲೇಶಪುರ ಅವರು ಭಾಗವಹಿಸಲಿದ್ದಾರೆ.

ಬಜರಂಗದಳ ಜಿಲ್ಲಾ, ಮತ್ತು ತಾಲೂಕು ಮುಖಂಡರುಗಳು ಹಾಗೂ ಸಂಘ ಪಾರಿವಾರದ ಎಲ್ಲಾ ಕಾರ್ಯಕರ್ತರು, ಸಮಸ್ತ ಹಿಂದೂ ಬಾಂಧವರು ಭಾಗವಹಿಸಲಿದ್ದಾರೆ.

Exit mobile version