ಬಳಂಜ: ಬೊಂಟ್ರೋಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಪ್ರತಿಷ್ಠೆ ಆಮಂತ್ರಣ ಬಿಡುಗಡೆ

0

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಇಲ್ಲಿ ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ,ನೇಮೋತ್ಸವ ಕಾರ್ಯಕ್ರಮಗಳು ಡಿ. 28-31 ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರು ಶಿವಗಿರಿ ನಿವಾಸ ಕಾಪಿನಡ್ಕದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಇದರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್, ಕೋಶಾಧಿಕಾರಿ ಪ್ರವೀಣ್ ಕುಮಾರ್ ಜಹೆಚ್.ಎಸ್,ಹಿರಿಯರಾದ ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ಕಲಶಾಭಿಷೇಕ ಸಮಿತಿ ಕಾರ್ಯದರ್ಶಿ ಗಣೇಶ್ ಪೂಜಾರಿ ಬೊಂಟ್ರೋಟ್ಟು, ಸದಾನಂದ ಪೂಜಾರಿ ಬೊಂಟ್ರೋಟ್ಟು, ಯುವ ನಾಯಕ ಸಂತೋಷ್ ಕುಮಾರ್ ಕಾಪಿನಡ್ಕ,ಹರೀಶ್ ರೈ ಬಳಂಜ, ನಿತ್ಯಾನಂದ ಹೆಗ್ಡೆ,ಪ್ರಸನ್ನ ಕುಮಾರ್,ಅಖಿಲ್ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here