ಡಿ.17: ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ

0

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ವತಿಯಿಂದ ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಬೆಳ್ತಂಗಡಿಯ ಹಳೆಕೋಟೆ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಡಿ.ರಂದು ನಿವೃತ್ತ ಪ್ರಾಚಾರ್ಯರಾದ ಎ.ಕೃಷ್ಣಪ್ಪ ಪೂಜಾರಿಯವರ ಸರ್ವಾಧ್ಯಕ್ಷತೆಯಲ್ಲಿ ಜರಗಲಿದೆ ಎಂದು ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಡಿ.ಯದುಪತಿ ಗೌಡ ಮತ್ತು ಸಂಯೋಜನಾ ಸಮಿತಿಯ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್ ಹೇಳಿದರು.

ಅವರು ಡಿ.11 ರಂದು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಈ ವರ್ಷ ಸುವರ್ಣ ಕರ್ನಾಟಕ ವರ್ಷವಾದ್ದರಿಂದ ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ ತಯಾರಿಸಲಾಗಿದೆ.

ಬೆಳಿಗ್ಗೆ ಕಲ್ಪತರು ಆವರಣದಿಂದ ಸಮ್ಮೇಳನದ ಚಪ್ಪರದವರೆಗೆ ಮೆರವಣಿಗೆಯಲ್ಲಿ ಗಣ್ಯರನ್ನು ಬರಮಾಡಿಕೊಳ್ಳಲಾಗುವುದು.ಬಳಿಕ ರಾಷ್ಟ್ರಧ್ವಜವನ್ನು ವಿಧಾನ ಪರಿಷತ್‌ನ ಶಾಸಕ ಕೆ.ಹರೀಶ್‌ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣವನ್ನು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ಎಂ.ಪಿ.ಶ್ರೀನಾಥರವರು ಮತ್ತು ಕನ್ನಡ ಧ್ವಜವನ್ನು ತಾಲೂಕಿನ ಅಧ್ಯಕ್ಷ ಡಿ.ಯದುಪತಿ ಗೌಡರು ಆರೋಹಣ ಮಾಡುವುದರೊಂದಿಗೆ ಸಮ್ಮೇಳನಕ್ಕೆ ಚಾಲನೆ ಸಿಗಲಿದೆ.ಅನಂತರ ಉದ್ಘಾಟನ ಸಮಾರಂಭ ಜರಗುತ್ತದೆ.

ಉದ್ಘಾಟಕರಾಗಿ ಚಿಕ್ಕಮಗಳೂರಿನ ಸಾಹಿತಿಗಳು, ಬರಹಗಾರರು, ನಾಟಕ ಅಕಾಡೆಮಿಯ ಮಾಜಿ ಸದಸ್ಯರೂ ಆಗಿರುವ ನಾಗರಾಜ್ ರಾವ್ ಕಲ್ಕಟ್ಟೆಯವರು ಆಗಮಿಸುತ್ತಾರೆ.ಸಮ್ಮೇಳನದ ಸಂಚಿಕೆ ಬಿಡುಗಡೆಯನ್ನು ಶಾಸಕ ಹರೀಶ್ ಪೂಂಜ ಮಾಡಲಿದ್ದಾರೆ.ಅತಿಥಿಗಳಾಗಿ ಶ್ರೀ ಧ ಮ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್., ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ.ಕುಶಾಲಪ್ಪಗೌಡ, ಸಮಾಜಸೇವಕ, ಸಾಂಸ್ಕೃತಿಕ ಮುಂದಾಳುಗಳೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯಮಿಗಳಾಗಿರುವ ಹಲೇಜಿಯ ಕಿರಣ್ ಕುಮಾರ್ ಪುಷ್ಪಗಿರಿ ಭಾಗವಹಿಸಲಿದ್ದಾರೆ.

ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು, ಸುವರ್ಣ ಕರ್ನಾಟಕ: ಭಾಷೆ, ಸಾಹಿತ್ಯ ಸಂಸ್ಕೃತಿ ಸಂವಾದ ಗೋಷ್ಠಿ ನಡೆಯಲಿದೆ.ಅಪರಾಹ್ನ ಬೆಳ್ತಂಗಡಿ ತಾಲೂಕಿನ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳ ಯುವ ಕವಿಗೋಷ್ಠಿ ನಡೆಯಲಿದೆ.

ಆಮೇಲೆ ನಾಡಿನ ಸಮೃದ್ಧಿಗಾಗಿ ಸೇವೆ ಸಲ್ಲಿಸಿದ ಹಿರಿಯರಾದ ಡಾ.ಕೆ ಎಂ ಶೆಟ್ಟಿ ಬಳ್ಳಮಂಜ(ಸಾಹಿತ್ಯ), ಗೋಪಾಲಕೃಷ್ಣ ಭಟ್ ಕಾಂಚೋಡು(ದೇಶ ಸೇವೆ), ಬೇಬಿ ಪೂಜಾರಿ ಪಿಲ್ಯ(ನಾಟಿ ವೈದ್ಯರು), ಡಾ.ಎನ್.ಎಂ ಜೋಸೆಫ್(ಶಿಕ್ಷಣ) ಮತ್ತು ಹೈದರಾಲಿ ಹಳ್ಳಿಮನೆ ಕೊಯ್ಯೂರು(ಜಾನಪದ ವಸ್ತು ಸಂಗ್ರಾಹಕರು) ಇವರಿಗೆ ಸನ್ಮಾನ ಮತ್ತು ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ಎಂ.ಪಿ ಶ್ರೀನಾಥರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ಜರಗಲಿದೆ.

ಸಮಾರೋಪ ಭಾಷಣಕಾರರಾಗಿ ಸುಳ್ಯದ ಡಾ.ಪೂವಪ್ಪ ಕಣಿಯೂರು ರವರನ್ನು ಆಹ್ವಾನಿಸಲಾಗಿದೆ.ಈ ಸಂದರ್ಭದಲ್ಲಿ ಅತಿಥಿಗಳಾಗಿ ಶಾಸಕ ಪ್ರತಾಪಸಿಂಹ ನಾಯಕ್, ಶರತ್‌ ಕೃಷ್ಣ ಪಡುವೆಟ್ನಾಯ ಉಜಿರೆ, ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಎಚ್.ಪದ್ಮ ಗೌಡ, ಸಾಹಿತ್ಯ ಸಂಸ್ಕೃತಿ ಪೋಷಕರಾದ ಶ್ರೀಶ ಮುಚ್ಚಿನ್ನಾಯರವರು ಪಾಲ್ಗೊಳ್ಳಲಿದ್ದಾರೆ.

ತಾಲೂಕಿನ ಸಾಹಿತ್ಯ ಸಂಸ್ಕೃತಿ ಮತ್ತು ಸಾಮಾಜಿಕ ಕಾರ್ಯಗಳಿಗೆ ಬಹಳಷ್ಟು ಕೊಡುಗೆ ನೀಡಿದೆ. “ರಮಾನಂದ ಸಾಲಿಯಾನ್ ಬೆಳ್ತಂಗಡಿಯವರ ಹೆಸರಿನ ವೇದಿಕೆಯಲ್ಲಿ ಸಮ್ಮೇಳನದ ಕಾರ್ಯಕಲಾಪ ಜರಗಲಿದ್ದು ಅವರ ಸಂಸ್ಮರಣೆಯ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.ಪ್ರತೀ ಗೋಷ್ಠಿ, ಭಾಷಣದ ತರುವಾಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಕನ್ನಡ ಗೀತೆಗಳ ಗಾಯನ ಮತ್ತು ನೃತ್ಯ ನಡೆಯಲಿದೆ.ಮಧ್ಯಾಹ್ನದ ಅವಧಿಯಲ್ಲಿ ಯುವಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನಾಮೃತ ನಡೆಯಲಿದೆ.

ಆಗಮಿಸುತ್ತಿರುವ ಸಂಪನ್ಮೂಲ ಅತಿಥಿಗಳು:
ಶಿವ ಪ್ರಸಾದ್ ಸುರ್ಯ, ಕಲಾಕುಂಚದ ಕು.ಮೆಹಕ್ ಪ್ರಸನ್ನಕಾಲೇಜು, ಡಾ.ಶ್ರೀಧರ ಭಟ್‌ ಉಜಿರೆ, ಡಾ.ಸುಬ್ರಹ್ಮಣ್ಯ ಭಟ್ ಮೇಲಂತಬೆಟ್ಟು, ಮಧೂರು ಮೋಹನ ಕಲ್ಲೂರಾಯ, ಚಂದ್ರಶೇಖರಗೌಡ, ವಸಂತಿ ಟಿ ನಿಡ್ಲೆ ಮೊದಲಾದವರು ಆಗಮಿಸಲಿದ್ದಾರೆ.

ಸಮಾರೋಪ ಸಮಾರಂಭದ ನಂತರ ಉಡುಪಿ ಕಲಾ ತಂಡದವರಿಂದ ವಿಶಿಷ್ಟ ವಾಡ ಜನಪದ ನೃತ್ಯ, ಸಂಗೀತ ಮತ್ತು ವಾದ್ಯ ಪರಿಕರಗಳ ಸಮ್ಮೇಳನ ಸಾಂಸ್ಕೃಕ ಕಾರ್ಯಕ್ರಮ ಜರಗಲಿದೆ.

ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಮೋಹನ ಗೌಡ, ಕಾರ್ಯದರ್ಶಿ ವಿಷ್ಣು ಪ್ರಕಾಶ್, ಕೋಶಾಧಿಕಾರಿ ಮೀನಾಕ್ಷಿ ಎನ್., ಸನ್ಮಾನ ಸಮಿತಿಯ ಸಂಚಾಲಕ ಲಕ್ಷ್ಮಣ ಪೂಜಾರಿ, ಉಟೋಪಾಹರ ಸಮಿತಿಯ ಸಂಚಾಲಕ ಲಕ್ಷ್ಮೀ ನಾರಾಯಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here