Site icon Suddi Belthangady

ಖೋಟಾನೋಟು ಪ್ರಕರಣದ ಆರೋಪಿಗಳ ಬಂಧನ

ಬೆಳ್ತಂಗಡಿ: ಖೋಟಾನೋಟು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.

2016ರಲ್ಲಿ ದಾಖಲಾಗಿದ್ದ ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಆರೋಪಿಗಳಾದ ಮೋಹನ ಕುಮಾರ್ ಹಾಗೂ ಕೆಂಪರಾಜ್ ಅವರ ಬಂಧನಕ್ಕೆ ಪ್ರೊಕ್ಲಮೇಷನ್ ಹೊರಡಿಸಿತ್ತಲ್ಲದೆ ಅವರ ಆಸ್ತಿಜಪ್ತಿಗೆ ವಾರಂಟ್ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಧರ್ಮಸ್ಥಳ ಠಾಣಾ ಪೊಲೀಸರು ಪ್ರಕರಣದ ಆರೋಪಿಗಳಾದ ಮೋಹನ್ ಮತ್ತು ಕೆಂಪರಾಜ್ ಅವರನ್ನು ಬಂಧಿಸಿದ್ದಾರೆ.ಬಂಧಿತ ಈರ್ವರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಬಂಧಿತರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ

ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಮತ್ತು ಧರ್ಮಸ್ಥಳ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಎಸ್.ಐ. ಅನಿಲ್ ಕುಮಾರ್ ಅವರ ಮಾರ್ಗದರ್ಶನದಂತೆ ಧರ್ಮಸ್ಥಳ ಠಾಣಾ ಕ್ರೈಂ ವಿಭಾಗದ ಎಸ್.ಐ. ಸಮರ್ಥ ಆರ್. ಗಾಣಿಗೇರ್, ಸಿಬ್ಬಂದಿಗಳಾದ ರಾಜೇಶ್ ಎನ್ ಮತ್ತು ವಿನಯ ಕುಮಾರ್‌ರವರು ಕಾರ್ಯಾಚರಣೆ ನಡೆಸಿದ್ದರು.

Exit mobile version