Site icon Suddi Belthangady

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ನಾಮಪತ್ರವನ್ನು ಡಿ.11 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು.

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಡಿ.19 ರಂದು ಸಹಕಾರ ಸಂಘಗಳ ಉಪನಿಬಂಧಕರ ಅಧಿಸೂಚನೆಯಂತೆ ನಡೆಯಲಿದೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಡಿಯಲ್ಲಿ ಮಾಜಿ ಅಧ್ಯಕ್ಷರಾದ ವಸಂತ ಮಜಲು ನೇತೃತ್ವದಲ್ಲಿ ಸಾಲಗಾರರ ಕ್ಷೇತ್ರದಲ್ಲಿ ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್‌ ಪಡಂತಾಯ, ಕೆ.ಕುಶಾಲಪ್ಪ ಗೌಡ, ಗೋಪಾಲ ಬನ, ಬಾಲಕೃಷ್ಣ ಬಿರ್ಮೊಟ್ಟು, ಪರಿಶಿಷ್ಟ ಜಾತಿ ಮೀಸಲು ಸ್ಥಾನದಲ್ಲಿ ಲೋಕೇಶ್ ನಾಳ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಲ್ಲಿ ಶೇಖ‌ರ್ ನಾಯ್ಕ, ಹಿಂದುಳಿದ ವರ್ಗ ಎ ಮೀಸಲು ಸ್ಥಾನದಲ್ಲಿ ಉದಿತ್, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಲ್ಲಿ ರಾಜಪ್ರಕಾಶ್‌, ಮಹಿಳಾ ಕ್ಷೇತ್ರದಲ್ಲಿ ಮಮತಾ ಆಲ್ವ, ಚಂದ್ರಾವತಿ, ಸಾಲಗಾರರಲ್ಲದ ಕ್ಷೇತ್ರದಲ್ಲಿ ಕೇಶವ ಸೇರಿದಂತೆ 12 ಮಂದಿ ಮಮತಾ ಆಲ್ವ, ಚಂದ್ರಾವತಿ, ಸಾಲಗಾರರಲ್ಲದ ಕ್ಷೇತ್ರದಲ್ಲಿ ಕೇಶವ ಸೇರಿದಂತೆ 12 ಮಂದಿ ನಾಮಪತ್ರ ಸಲ್ಲಿಸಿದರು.

Exit mobile version