ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿಯ ತ್ರೈಮಾಸಿಕ ಸಭೆ, ವಿಶ್ವಕರ್ಮ ಯೋಜನೆಯ ನೋಂದಾವಣೆ

0

ಬೆಳ್ತಂಗಡಿ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ರಿ ವಲಯ ಸಮಿತಿ ಬೆಳ್ತಂಗಡಿ ಇದರ ತ್ರೈ ಮಾಸಿಕ ಸಭೆ ಹಾಗೂ ವಿಶ್ವ ಕರ್ಮ ಯೋಜನೆಯ ಮಾಹಿತಿ, ಎಂಬ್ರಾಯಿಡಿಂಗ್ ತರಬೇತಿ ಕುರಿತು ಮಾಹಿತಿ ಡಿ.12 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆಯನ್ನು ವಲಯ ಸಮಿತಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಿಶ್ವಕರ್ಮ ಯೋಜನೆಯ ನೋಡೆಲ್ ಅಧಿಕಾರಿಗಳಾದ ಸಂತೋಷ್ ಬೆಳ್ತಂಗಡಿ, ಜಿಲ್ಲಾ ಸಮಿತಿ ಅಧ್ಯಕ್ಷರಾದ ಜಯಲಾಕ್ಷ ಕೋಟ್ಯಾನ್, ಜಿಲ್ಲಾ ಸಮಿತಿ ಉಪಾಧ್ಯಕ್ಷರಾದ ಶಾಂಭವಿ ಪಿ.ಬಂಗೇರ, ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷ ವೇದಾವತಿ ಜನಾರ್ಧನ್ ಭಾಗವಹಿಸಿ ಶುಭ ಹಾರೈಸಿದರು.

ವಲಯ ಸಮಿತಿ ಕಾರ್ಯದರ್ಶಿ ಶಶಿಕಲಾ ಹಾಗೂ ಕೋಶಾಧಿಕಾರಿ ಜಯರಾಮ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಹರಿಣಿ ಪ್ರಾರ್ಥಿಸಿದರು. ಶಶಿಕಲಾ ಎಲ್ಲರನ್ನೂ ಸ್ವಾಗತಿಸಿದರು. ಜಿಲ್ಲಾ ಮಾಜಿ ಕಾರ್ಯದರ್ಶಿ ನವೀನ್ ಟೈಲರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಾನಂದ ಸಾಲಿಯಾನ್ ಬಳಂಜ ಹಾಗೂ ಹರೀಶ್ ಜಿ.ವಿ ಸವಣಾಲು ಕಾರ್ಯಕ್ರಮ ನಿರೂಪಿಸಿದರು.ಸುರೇಖಾ ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here