ಬೆಳ್ತಂಗಡಿ ವಕೀಲರ ಭವನದಲ್ಲಿ ಕ್ರಿಸ್‌ಮಸ್ ಆಚರಣೆ- ಮೆರುಗು ತಂದ ಸಾಂತಾಕ್ಲಾಸ್

0

ಬೆಳ್ತಂಗಡಿ : ಬೆಳ್ತಂಗಡಿ ವಕೀಲ ಸಂಘ, ಬೆಳ್ತಂಗಡಿ ಯುವ ವಕೀಲರ ವೇದಿಕೆ ಇದರ ಜಂಟಿ ಆಶ್ರಯದಲ್ಲಿ ಕ್ರಿಸ್‌ಮಸ್ ಆಚರಣೆ ಡಿ.12 ರಂದು ಸಂಘದ ಅಧ್ಯಕ್ಷ ವಸಂತ ಮರಕಡ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ದೇವರಾಜು ಎಚ್.ಎಮ್., ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ್ ಕೆ., ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್., ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ. ಹಾಗೂ ಹಿರಿಯ ವಕೀಲ ಧನಂಜಯ್ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೆಲ್ಫಿ ವಿಥ್ ಸಾಂತಾಕ್ಲಾಸ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಬೆಳ್ತಂಗಡಿ ವಕೀಲರ ಸಂಘದ ಹಿರಿಯ ಸಮಿತಿಯ ಅಧ್ಯಕ್ಷ ಅಲೋಶಿಯಸ್ ಲೋಬೊ ಸ್ವಾಗತಿಸಿ, ಸಂಘದ ಮಾಜಿ ಅಧ್ಯಕ್ಷ ಸೇವಿಯರ್ ಪಾಲೇಲಿ ನಿರೂಪಿಸಿದರು. ವಕೀಲೆ ಜೋಸ್ನಾ ಸಹಕರಿಸಿದರು.

LEAVE A REPLY

Please enter your comment!
Please enter your name here