ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ: ರಥಯಾತ್ರೆ

0

ಬೆಳ್ತಂಗಡಿ: ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನ್ಯಾಯಾಲಯದ ಆವರಣದಲ್ಲಿ ಬಾಲಕಾರ್ಮಿಕರ ಪುನರ್ವಸತಿ ಮತ್ತು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಮಾಹಿತಿ ನೀಡಲು ಆಗಮಿಸಿದ ರಥಯಾತ್ರೆಗೆ ಚಾಲನೆ ನೀಡಲಾಯಿತು.

ಹಿರಿಯ ನ್ಯಾಯಾಧೀಶ ದೇವರಾಜ್,ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ., ಸಿಡಿಪಿಒ ಪ್ರಿಯಾ ಆಗ್ನೇಸ್, ಕಾರ್ಮಿಕ ನಿರೀಕ್ಷಕ ಹರೀಶ್ ಎಸ್.ಎನ್., ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಮತ್ತಿತರರು ಉಪಸ್ಥಿತರಿದ್ದರು.

ರಥವು ತಾಲೂಕಿನ ಹಲವು ಕಡೆ ಸಂಚರಿಸಿ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಕುರಿತು ಮಾಹಿತಿ ನೀಡಿತು.

LEAVE A REPLY

Please enter your comment!
Please enter your name here