Site icon Suddi Belthangady

ಡಿ.19: ಉಜಿರೆ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಉಜಿರೆ: ಗ್ರಾಮ ಪಂಚಾಯತ್ ಮತ್ತು ಉಜಿರೆಯ ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ಡಿ.19ರಂದು ಮಂಗಳವಾರ  ಬೆಳಿಗ್ಗೆ 10ಕ್ಕೆ ಉಜಿರೆ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾಂಗಣದಲ್ಲಿ  ಭಾರತ ಸರಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ವಿಶೇಷ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್, ಅಯುಷ್ಮಾನ್ ಕಾರ್ಡ್, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಉಜ್ವಲ್ ಗ್ಯಾಸ್ ಯೋಜನೆಗಳಿಗೆ ನೋಂದಾವಣೆ ಮಾಡಿಕೊಳ್ಳಲಾಗುವುದು ಹಾಗು ಸ್ಥಳದಲ್ಲಿಯೇ ಅರೋಗ್ಯ ತಪಾಸಣೆ ನಡೆಸಲಾಗುವುದು.

ಯೋಜನೆಯ ಪ್ರಯೋಜನ ಪಡೆಯಬಯಸುವವರು ಆ ದಿನ ಬ್ಯಾಂಕ್ ಪಾಸ್ ಪುಸ್ತಕ, ಆರ್.ಟಿ.ಸಿ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ತೆಗೆದುಕೊಂಡು ಬರುವುದು ಎಂದು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.                     

Exit mobile version