ಬೆಳಾಲು ಗ್ರಾ.ಪಂ.ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

0

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ನ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಡಿ.15ರಂದು ನೆರವೇರಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಶ್ರೀಸೌಧ ಬೆಳಾಲು ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗೀತಾ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಸುರೇಂದ್ರ ಗೌಡ, ಮಾಜಿ ಉಪಾಧ್ಯಕ್ಷರು ಹಾಲಿ ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀಭಾಯಿ, ವೈದ್ಯರಾದ ಡಾ|ಚೇತನ್ , ಬೆಳಾಲು ಸಿ.ಎ ಬ್ಯಾಂಕ್ ಕಾರ್ಯನಿರ್ವಣಾಧಿಕಾರಿ ನಾರಾಯಣ ಗೌಡ ಎಳ್ಳುಗದ್ದೆ, ಬೆಳಾಲು ಸಿ. ಎ ಬ್ಯಾಂಕ್ ನಿರ್ದೇಶಕರಾದ ರಮೇಶ್ ಗೌಡ ಅಂಗಡಿಬೆಟ್ಟು, ನೋಟರಿ ವಕೀಲರಾದ ಶ್ರೀನಿವಾಸ್ ಗೌಡ, ಉದ್ಯಮಿ ಸಿಲ್ವೆಸ್ಟರ್ ಮೋನಿಶ್, ಪ್ರಮುಖರಾದ ಸೀತಾರಾಮ್ ಬಿ.ಯಸ್ , ಯಶವಂತ ಗೌಡ ಬನಂದೂರು, ಜಯಾನಂದ ಗೌಡ ಎರ್ದೋಟ್ಟು, ರಾಜೇಶ್ ಗೌಡ ಪಾರ್ಲ,ಬೆಳಾಲು ಹಾ.ಉ.ಸ. ಸಂಘದ ಉಪಾಧ್ಯಕ್ಷರಾದ ಜಿನೇಶ್ ಜೈನ್ ನಿರ್ದೇಶಕರಾದ ಪ್ರಭಾಕರ ಗೌಡ, ಪಂಚಾಯತ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here