ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

0

ನಿಡ್ಲೆ: ಪಿಲಿಕಜೆ ಬೈಲುವಾರು ಸಮಿತಿಯ ವತಿಯಿಂದ ಡಿ.10ರಂದು ಶ್ರಮದಾನ ನಡೆಯಿತು.

ಪ್ರತೀ ವರ್ಷದಂತೆ 7ನೇ ವರ್ಷದ ಶ್ರಮದಾನವು ನಿಡ್ಲೆ ರಾಜ್ಯ ಹೆದ್ದಾರಿಯಿಂದ ಪಟ್ರಮೆ ಜಿ.ಪಂ ರಸ್ತೆಯ ಎರಡೂ ಬದಿಯ ಗಿಡಗಂಟಿ ಕಡಿದು ಪ್ರಯಾಣಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಅನುಕೂಲ ಮಾಡಿದರು.ಡಾಂಬರು ರಸ್ತೆ ಅಲ್ಲಲ್ಲಿ ದೊಡ್ಡದಾದ ಹೊಂಡಗಳಿಗೆ ಮಣ್ಣು ಹಾಕಿ ಸಮತಟ್ಟುಗೊಳಿಸಲಾಯಿತು.

ಕಳೆಕೊಚ್ಚುವ ಯಂತ್ರವನ್ನು ಲಕ್ಷ್ಮಣ ಗೌಡ ನೂಜಿಲ, ಕೃಷ್ಣ ಪ್ರಸಾದ್ ಐತೂರು, ಪದ್ಮನಾಭ ನೆಕ್ಕರೆ, ಪದ್ಮಯ್ಯ ಗೌಡ ಪಿಲಿಕಜೆ, ಪೂವಪ್ಪ ಗೌಡ ಪರಾಂಡ, ಚೀಂಕ್ರ ಮಾಪಲಾಜೆ ಇವರು ಕೊಟ್ಟು ಸಹಕರಿಸಿದರು.

ಬೆಳಗ್ಗಿನ ಉಪಹಾರವನ್ನು ರಾಜೇಶ್ ಉಳ್ಳಾಲ್ತಿ ಚಿಕನ್ ಸೆಂಟರ್ ಹಾಗೂ ಪಿಕಪ್ ವ್ಯವಸ್ಥೆಯನ್ನು ಜಿತೇಂದ್ರ ಶೆಟ್ಟಿ, ಪೆಟ್ರೋಲ್ ವ್ಯವಸ್ಥೆಯನ್ನು ಯಾದವ್ ಸಣಿಲ, ಊಟದ ವ್ಯವಸ್ಥೆಯನ್ನು ಅಧ್ಯಕ್ಷ ಹೊನ್ನಪ್ಪ ಗೌಡ ಹಿರಿಂಬಿ, ತಂಪು ಪಾನೀಯ ವ್ಯವಸ್ಥೆಯನ್ನು ನಾರಾಯಣ ಮಾಪಲಾಜೆ, ಜಯಪ್ರಸಾದ್ ಪರಾಂಡ, ಗೋವಿಂದ ಗೌಡ ಶಂಕರಡ್ಕ, ಪುಷ್ಪರಾಜ್ ಪಿಲಿಕಜೆ, ವಸಂತ ಹೈಸ್ಕೂಲ್ ಬಲ್ಮನೆ ಇವರೆಲ್ಲರೂ ಕೊಟ್ಟು ಸಹಕರಿಸಿದರು.

ರಾಮಣ್ಣ ಗೌಡ ಹೊಸಮನೆ ಪೆರ್ಲೆ ಹಾಗೂ ಚಿದಾನಂದ ಶೆಟ್ಟಿ ಸಹಕರಿಸಿದರು.

ಪಿಲಿಕಜೆ ಬೈಲುವಾರು ಸಮಿತಿಯ ಕಾರ್ಯದರ್ಶಿ ಅಶೋಕ ಪಿಲಿಕಜೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here