ನಿಡ್ಲೆಯಲ್ಲಿ ಸೌಜನ್ಯ ಪರ ಹೋರಾಟ ಸಮಿತಿಯ ಆಶ್ರಯದಲ್ಲಿ ಬೃಹತ್ ಜನಾಂದೋಲನ ಸಭೆ

0

ನಿಡ್ಲೆ : ಸೌಜನ್ಯ ಪರ ಹೋರಾಟ ಸಮಿತಿ ನಿಡ್ಲೆಯ ಆಶ್ರಯದಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಸನಾತನ ಹಿಂದೂ ಧರ್ಮದ ಪ್ರತಿಪಾದಕ ಮಹೇಶ್ ಶೆಟ್ಟಿ ತಿಮರೋಡಿಯವರ ಭಾಗವಹಿಸುವಿಕೆಯಲ್ಲಿ ಬೃಹತ್ ಜನಾಂದೋಲನ ಸಭೆ ಡಿ‌.17 ರಂದು ನಿಡ್ಲೆ ಮಹಾ ಗಣಪತಿ ಭಜನಾ ಮಂದಿರದಲ್ಲಿ ನಡೆಯಿತು.

ಕು.ಸೌಜನ್ಯರ ತಾಯಿ ಕುಸುಮಾವತಿ ಚಂದಪ್ಪ ಗೌಡ ಪಾಂಗಳ, ನಿವೃತ್ತ ಪೊಲೀಸ್ ಅಧಿಕಾರಿ ಗೀರಿಶ್ ಮಟ್ಟಣ್ಣನವರ್, ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನರವಿ, ತುಳು ಜಾನಪದ ವಾಗ್ಮಿ ತಮ್ಮಣ್ಣ ಶೆಟ್ಟಿ, ಬೆಳ್ತಂಗಡಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಅನಿಲ್ ಅಂತರ ಮತ್ತು ನೀತಿ ತಂಡದ ರಾಜ್ಯಧ್ಯಕ್ಷ ಜಯಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಿತಿಯ ಅಧ್ಯಕ್ಷ ಪದ್ಮನಾಭ ಗೌಡ ನೆಕ್ಕರೆ‌, ಭಜನಾ ಮಂದಿರದ ಅಧ್ಯಕ್ಷ ಜಯಂತ್, ಭಜನಾ ಮಂದಿರದ ಕಾರ್ಯದರ್ಶಿ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.

ಧನುಷ್ ಸ್ವಾಗತಿಸಿ , ಸಮಿತಿಯ ಸಂಚಾಲಕ ಜಗದೀಶ್ ನಿಡ್ಲೆ ನಿರೂಪಿಸಿದರು. ಅಶೋಕ್ ಸಹಕರಿಸಿದರು.

LEAVE A REPLY

Please enter your comment!
Please enter your name here