Site icon Suddi Belthangady

ಮಲೆಬೆಟ್ಟು ಶ್ರೀ ಮಹಾಗಣಪತಿ, ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಷಯ ಪೂಜೆ

ಉಜಿರೆ : ಉಜಿರೆ ಗ್ರಾಮದ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಶ್ರೀ ಸುಬ್ರಮಣ್ಯ ಷಷ್ಟಿ ಪ್ರಯುಕ್ತ ಡಿ.18 ರಂದು ವಿಷಯ ಪೂಜಾ ಕಾರ್ಯಕ್ರಮಗಳು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ ಮಾಹಿಗಣಪತಿ ದೇವರ ಸನ್ನಿಧಿಯಲ್ಲಿ ಅಭಿಷೇಕ, ಸುಬ್ರಮಣ್ಯ ದೇವರಿಗೆ ಕ್ಷೀರಾಭಿಷೇಕ, ಸಿಯಾಳಾಭಿಷೇಕ,ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಮದ್ಯಾಹ್ನ ಕಾರ್ತಿಕ ಪೂಜೆ, ಮಹಾ ಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿ ಅಧ್ಯಕ್ಷರು, ಸದಸ್ಯರು ಸಹಕರಿಸಿದರು.

ದಾನಿಗಳು, ಊರ ಪರ ಊರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು

Exit mobile version