ಶಿಶಿಲ: ಕೋಟೆ ಬಾಗಿಲು ನಿವಾಸಿ ಸುರೇಶ್ ಎಂಬವರಿಂದ ಹೆಂಡತಿ ಮಕ್ಕಳಿಗೆ ಮಾರಣಾಂತಿಕ ಹಲ್ಲೆ- ಎಡ ಕಣ್ಣು ಮತ್ತು ಮುಖದ ಮಾಂಸ ಕಚ್ಚಿ ಹೊರ ತೆಗೆದ ಘಟನೆ

0

ಶಿಶಿಲ: ಕೋಟೆ ಬಾಗಿಲು ನಿವಾಸಿ ಸುರೇಶ್ ಎಂಬವರಿಂದ ಹೆಂಡತಿ ಮಗಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣ ಡಿ.18 ರಂದು ತಡರಾತ್ರಿ ನಡೆದಿದೆ.

ಎಡ ಕಣ್ಣು ಮತ್ತು ಮುಖದ ಮಾಂಸ ಕಚ್ಚಿ ಹೊರ ತೆಗೆದ ಘಟನೆ: ಸುರೇಶ್ ಎಂಬವರು ತನ್ನ ಹೆಂಡತಿಯ ಮುಖದ ಬಾಗಕ್ಕೆ ಕಚ್ಚಿ ಮಾಂಸ ಹೊರತೆಗೆದು ಕಣ್ಣಿಗೆ ಕೂಡ ಕೋಲಿನಿಂದ ಹೊಡೆದು ಎಡ ಭಾಗದ ಕಣ್ಣನ್ನು ಸಂಪೂರ್ಣ ಹಾನಿಗೊಳಿಸಿದ್ದಾರೆ.ಇನ್ನು ಮಗಳಿಗೆ ತಲೆಯಭಾಗಕ್ಕೆ ಹೊಡೆದಿದ್ದು ಪ್ರಾಣ ಭಯದಿಂದ ಇಬ್ಬರು ತಪ್ಪಿಸಿಕೊಂಡು ನೆರೆ ಹೊರೆಯವರ ಬಳಿ ಬಂದು ಸಹಾಯ ಕೇಳಿದ್ದಾರೆ ತಕ್ಷಣ ಸ್ಪಂದಿಸಿದ ಸ್ಥಳೀಯರು ಆಂಬ್ಯುಲೆನ್ಸ್ ಸಹಾಯದಿಂದ ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ತಾಯಿ ಮತ್ತು ಮಗಳನ್ನು ದಾಖಲಿಸಿದ್ದಾರೆ.

ಧರ್ಮಸ್ಥಳ ಪೊಲೀಸರಿಗೆ ಈ ಪ್ರಕರಣದ ಕುರಿತು ಮಾಹಿತಿ ದೊರೆತಿದ್ದು, ಆಸ್ಪತ್ರೆಗೆ ತೆರಳಿ ಘಟನೆಯ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here