ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದ ಮರದ ಮುಹೂರ್ತ, ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

0

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಡಿ.19 ರಂದು ಸಂಜೆ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವದ ಮಹಾ ಅನ್ನದಾನದ ಕೂಪನ್ ಬಿಡುಗಡೆ ಕಾರ್ಯಕ್ರಮವನ್ನು ಮಾಜಿ ಶಾಸಕ ವಸಂತ ಬಂಗೇರ ಇವರು ಬಿಡುಗಡೆ ಮಾಡಿ ದಿ.ರಾಮಕೃಷ್ಣ ನಾಯಕ್ ಹಾಗೂ ದಿ.ಕಮಲಮ್ಮ ಇವರ ಸ್ಮರಣಾರ್ಥ ಅಚ್ಚುತ್ತ ನಾಯಕ್ ಮತ್ತು ಮನೆಯವರು ಅಭೀಕ್ಷಾ ನಿಲಯ ನಾವೂರು ಇವರಿಗೆ ಮೊದಲ ಕೂಪನ್ ಹಸ್ತಾಂತರ ಮಾಡಿದರು.

ವೇದಿಕೆಯಲ್ಲಿ ಪ್ರದಾನ ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ವಾಸುದೇವ ರಾವ್ ಕಕ್ಕಿನೇಜಿ ಹಾಗೂ ಮಂಜುನಾಥ್ ಕಾಮತ್, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ದಿನೇಶ್ ಗೌಡ ದಿಡುಪೆ, ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಆಡಳಿತಾಧಿಕಾರಿ ಮೋಹನ್ ಬಂಗೇರ ಹಾಗೂ ಸಭೆಯಲ್ಲಿ ಊರ-ಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಘಟನಾ ಕಾರ್ಯದರ್ಶಿ, ವಿನಯಚಂದ್ರ ಸೇನರಬೆಟ್ಟು ಸ್ವಾಗತಿಸಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧನಂಜಯ ರಾವ್ ಪ್ರಾಸ್ತಾವಿಕ ಮಾತನಾಡಿ ವಂದಿಸಿದರು.

LEAVE A REPLY

Please enter your comment!
Please enter your name here