Site icon Suddi Belthangady

ಧರ್ಮಸ್ಥಳ: ದೇವಸ್ಥಾನಕ್ಕೆ ಬಂದ ಯಾತ್ರಾರ್ಥಿಯ ಮಾಂಗಲ್ಯ ಇರಿಸಿದ್ದ ಪರ್ಸ್ ಕಳವು

ಧರ್ಮಸ್ಥಳ: ಧರ್ಮಸ್ಥಳಕ್ಕೆ ತನ್ನ ಸ್ನೇಹಿತೆಯರ ಜೊತೆ ಯಾತ್ರಾರ್ಥಿಗಳಾಗಿ ಬಂದವರು, ಸುಬ್ರಮಣ್ಯಕ್ಕೆ ಹೋಗಲು ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಸಂಜೆ ನಿಂತುಕೊಂಡಿದ್ದಾಗ, ಜನಸಂದಣಿಯಲ್ಲಿ ಯಾತ್ರಾರ್ಥಿಯ ಕೈಯಲ್ಲಿದ್ದ ಮಾಂಗಲ್ಯ ಸರವನ್ನು ಇರಿಸಿದ ಪರ್ಸ್ ನ್ನು ಯಾರೋ ಕಳ್ಳರು ಕಳವು ಮಾಡಿಕೊಂಡ ಘಟನೆ ಡಿ.18 ರಂದು ನಡೆದಿದೆ.

ಉತ್ತರ ಬೆಂಗಳೂರು ಪಲನಿ ಮುದಲಿಯಾರ್ ಸ್ಟ್ರೀಟ್, ಹಲಸೂರು ನಿವಾಸಿ ಶ್ರೀದೇವಿ (39ವ) ಎಂಬವರ ದೂರಿನಂತೆ, ಡಿ.18 ರಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ತನ್ನ ಸ್ನೇಹಿತೆಯರ ಜೊತೆ ಯಾತ್ರಾರ್ಥಿಗಳಾಗಿ ಬಂದವರು, ಬಳಿಕ ಸುಬ್ರಮಣ್ಯಕ್ಕೆ ಹೋಗಲು ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಸಂಜೆ ನಿಂತುಕೊಂಡಿದ್ದಾಗ, ಜನಸಂದಣಿಯಲ್ಲಿ ಮಹಿಳೆಯ ಕೈಯಲ್ಲಿದ್ದ ಮಾಂಗಲ್ಯ ಸರವನ್ನು ಇರಿಸಿದ ಪರ್ಸ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.

Exit mobile version