Site icon Suddi Belthangady

ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ, ರಂಗಪೂಜೆ

ಧರ್ಮಸ್ಥಳ: ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಎರ್ಮುಂಜೆ ಬೈಲ್ ನಾರ್ಯ ಕನ್ಯಾಡಿ-2, ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ ಮತ್ತು ರಂಗಪೂಜೆಯು ಡಾ|| ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಡಿ.18 ರಂದು ನಡೆಯಿತು.

ಬೆಳಗ್ಗೆ ದೇವರಿಗೆ ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಮಹಾಪೂಜೆ ಮತ್ತು ಊರವರಿಂದ ಭಜನಾ ಕಾರ್ಯಕ್ರಮವು ನೆರವೇರಿತು.

ದೇವಸ್ತಾನದ ಅನುವಂಶಿಕ ಆಡಳಿತ ಮೊಕ್ತೇಸರ ರಾಮ ಪ್ರಸಾದ್ ಪಾಂಗಣ್ಣಾಯ ಮತ್ತು ಊರಿನ ಭಕ್ತಾದಿಗಳು ಪಾಲ್ಗೊಂಡಿದ್ದರು.

Exit mobile version