Site icon Suddi Belthangady

ಶಿಶಿಲ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಶಿಶಿಲ: ಬ್ಯಾಂಕ್ ಆಪ್ ಬರೋಡಾ ಶಿಶಿಲ ಮತ್ತು ಶಿಶಿಲ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.22 ರಂದು ಶಿಶಿಲ ಗ್ರಾಮ ಪಂಚಾಯತಿಯ ಸಭಾಭವನದಲ್ಲಿ ನಡೆಯಿತು.

ಶಿಶಿಲ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಮೂಡೆತ್ತಾಯ ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ಅಧ್ಯಕ್ಷತೆ ವಹಿಸಿದ್ದರು. ಶಿಶಿಲ ಪಂಚಾಯತ್ ಅಧ್ಯಕ್ಷ ಸುಧಿನ್ ಡಿ ರವರು ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಯೋಗೀಶ್ ಆಲಂಬಿಲ ವಿವಿಧ ಸೌಲಭ್ಯಗಳ ಹಾಗೂ ಯೋಜನೆಗಳ ಅನುಷ್ಠಾನದ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಶಿಶಿಲ ಬ್ಯಾಂಕ್ ಆಪ್ ಬರೋಡದ ಪ್ರಬಂದಕರಾದ ರಾಕೇಶ್, ಶಿಶಿಲ ಗ್ರಾ.ಪಂ ಅಧ್ಯಕ್ಷರಾದ ಸುದಿನ್ .ಡಿ, ಉಪಾಧ್ಯಕ್ಷರಾದ ಯಶೋಧರ ಕೆ.ವಿ, ಕೊಕ್ಕಡ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರಾದ ಯೋಗೀಶ್ ಆಲಂಬಿಲ, ಸುಮಿತ್ ಶೆಟ್ಟಿ, ಶ್ರೀನಿವಾಸ್ ಮೂಡೆತ್ತಾಯ ಉಪಸ್ಥಿತರಿದ್ದರು.

ಸಭೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಭಾಕರ್ ಗೌಡ, ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂಎಸ್, ಶಿಬಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿನಕರ್ ಕುರುಪ್, ತಾ .ಪಂ ಮಾಜಿ ಮೆಂಬರ್ ಚೇತನ ಚಂದ್ರಶೇಖರ್ ಪಂಚಾಯತ್ ಸದಸ್ಯರು, ಸಿಬ್ಬಂಧಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು,ಆಶಾ ಕಾರ್ಯಕರ್ತೆಯರು,ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಸುಮಾ ಸಂಜಯ್, ಪ್ರಾಸ್ತಾವಿಕ ನುಡಿಯನ್ನು ಸುಮಿತ್ ಶೆಟ್ಟಿ, ನಿರೂಪಣೆಯನ್ನು ಸುಂದರ.ಕೆ, ಮತ್ತು ದಿನಕರ್ ಕುರುಪ್, ಸ್ವಾಗತವನ್ನು ಕರುಣಾಕರ ಶಿಶಿಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ಧನ್ಯವಾದವಿತ್ತರು.

Exit mobile version