Site icon Suddi Belthangady

ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

ಗುರುವಾಯನಕೆರೆ: ಇಲ್ಲಿನ ಪ್ರಸಿದ್ಧ ವಿದ್ಯಾಸಂಸ್ಥೆ ಎಕ್ಸೆಲ್ ಪಿಯು.ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023 ಅದ್ಧೂರಿ ಕಾರ್ಯಕ್ರಮ ಡಿ.24 ರಂದು ಗುರುವಾಯನಕೆರೆಯ ವಿದ್ಯಾಸಾಗರ್ ಕ್ಯಾಂಪಸ್ಸಿನಲ್ಲಿ ನಡೆಯಿತು.

ಮಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಜಯರಾಜ್ ಅಮೀನ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ನಿರ್ದೇಶಕ ಸುಮಂತ್ ಕುಮಾರ್ ಜೈನ್ ಬಿ.ವಹಿಸಿದ್ದರು.

ಗುರುವಾಯನಕೆರೆಯ ಪ್ರಸಿದ್ಧ ವೈದ್ಯ ವೇಣುಗೋಪಾಲ್ ಶರ್ಮಾ, ನಿವೃತ್ತ ಪ್ರಾಂಶುಪಾಲ ಮಾರಗುತ್ತು ವಿಜಯ ಅಧಿಕಾರಿ, ಶಮಂತ್ ಕುಮಾರ್ ಜೈನ್, ಪ್ರಾಂಶುಪಾಲ ನವೀನ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ಕಾರ್ಯದರ್ಶಿ ಅಭಿರಾಮ್ ಸ್ವಾಗತಿಸಿದರು.ಉಪನ್ಯಾಸಕ ಆರ್ವೀನ್ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.

Exit mobile version