Site icon Suddi Belthangady

ಶಿರ್ಲಾಲು ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ

ಶಿರ್ಲಾಲು ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಡಿ.26 ರಂದು ನಡೆಯಿತು.

ಶ್ರೀ ಮಹಾಲಕ್ಷ್ಮೀ ಕ್ಷೇತ್ರ ಶ್ರೀ ಧಾಮ ಮಾಣಿಲದ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ಆಶೀರ್ವಚನ ನೀಡಿದರು.

ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ವಹಿಸಿದ್ದರು. ಕಲಬುರ್ಗಿ ಕೇಂದ್ರೀಯ ವಿಶ್ವವಿದ್ಯಾನಿಲಯದ ಉಪನ್ಯಾಸಕ ರೋಹಿಣಾಕ್ಷ ಶಿರ್ಲಾಲು ಧಾರ್ಮಿಕ ಉಪನ್ಯಾಸ ನೀಡಿದರು.

ಮಾಜಿ ಶಾಸಕ ಪ್ರಭಾಕರ ಬಂಗೇರ, ಶಿರ್ಲಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಸಾಮಾನಿ, ಬೆಳ್ತಂಗಡಿ ವೀರಶೈವ ಲಿಂಗಾಯತ ಸಮಾಜದ ಕಾರ್ಯದರ್ಶಿ ನವೀನ್ ಪ್ರಕಾಶ್, ಶಿರ್ಲಾಲು ಗ್ರಾ.ಪಂ.ಮಾಜಿ ಅಧ್ಯಕ್ಷೆ ಗುಣಮ್ಮ ಟಿಜೈನ್ ಹಿತ್ತಿಲು, ಹುರುಂಬಿದೊಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಹರ್ಷ ಆರ್ ಜೈನ್, ಬೇಗಗ್ಯೊಟ್ಟು ಪಿಲಿಚಾಮುಂಡಿ ಕ್ಷೇತ್ರದ ಮೊಕ್ತೇಸರ ಸುಂದರ ಬುನ್ನಾಲ್, ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಅಧ್ಯಕ್ಷ ಬಾಬು ಎರ್ಮೆತ್ತೋಡಿ, ಪ್ರಭಾಕರ ಎನ್ ಮತ್ತು ಆನಂದ ಸಾಲಿಯಾನ್ ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿರಾಜ್ ಸ್ವಾಗತಿಸಿದರು.

Exit mobile version