Site icon Suddi Belthangady

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪಡಂಗಡಿ ಪ್ರಾ.ಕೃ.ಪ.ಸ.ಸಂಘಕ್ಕೆ ದೇಣಿಗೆ ಹಸ್ತಾಂತರ

ಪಡಂಗಡಿ: ಪ್ರಾ.ಕೃ.ಪ.ಸ.ಸಂ.ಸಭಾಂಗಣ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ|ಡಿ.ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ರೂ.2.50ಲಕ್ಷ ಮೊತ್ತದ ದೇಣಿಗೆಯನ್ನು ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ರವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೇಸ್, ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಎ, ಉಪಾಧ್ಯಕ್ಷ ನರೇಂದ್ರ ಕುಮಾರ್, ನಿರ್ದೇಶಕರುಗಳಾದ ನಾರಾಯಣ ಮೂಲ್ಯ, ಉಮೇಶ್, ಪದ್ಮನಾಭ ನಾಯ್ಕ, ರಾಮು, ಸಂತೋಷ್ ಶೆಟ್ಟಿ ಯೋಜನಾಧಿಕಾರಿಗಳಾದ ದಯಾನಂದ ಪೂಜಾರಿ ಪಿ. ಮತ್ತು ಪಡಂಗಡಿ ಒಕ್ಕೂಟದ ಮಾಜಿ ಅಧ್ಯಕ್ಷ ಕುಂಞಪ್ಪ ಮೂಲ್ಯ ಹಾಗೂ ವಲಯ ಮೇಲ್ವಿಚಾರಕಿ ಹೇಮಾವತಿಯವರು ಉಪಸ್ಥಿತರಿದ್ದರು.

Exit mobile version