Site icon Suddi Belthangady

ಇಂದು(ಡಿ.27) ನಾವೂರಿನಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವ-ಪಂದಳರಾಜ ರವಿಕುಮಾರ ವರ್ಮ ದಂಪತಿ ಭಾಗಿ

ನಾವೂರು: ನಾವೂರು ಶ್ರೀ ಅಯ್ಯಪ್ಪಸೇವಾ ಸಮಿತಿ ವತಿಯಿಂದ ಶ್ರೀ ಅಯ್ಯಪ್ಪ ದೀಪೋತ್ಸವವು ಇಂದು (ಡಿ.27) ಶ್ರೀ ಗುರುಕೃಪಾ ಭಜನಾ ಮಂದಿರದ ವಠಾರದಲ್ಲಿ ನಾವೂರು ಶ್ರೀ ಸೇಸಪ್ಪ ಗುರುಸ್ವಾಮಿ ಮತ್ತು ತೋಟತ್ತಾಡಿ ರವಿ ಗುರುಸ್ವಾಮಿಯವರ ನೇತೃತ್ವದಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ದಕ್ಷಿಣ ಕನ್ನಡ ಇವರಿಂದ “ಹರಿವರಾಸನಂ ಗೀತೆಯ ಶತಾಬ್ದಿ” ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮದಲ್ಲಿ ಪಂದಳರಾಜ ರವಿಕುಮಾರ ವರ್ಮ ದಂಪತಿ ಭಾಗವಹಿಸಲಿದ್ದಾರೆ.

ರಾತ್ರಿ ಗಂಟೆ 8ರಿಂದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ಡಾ| ಪ್ರದೀಪ್ ಎ.ಇವರ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ವಜ್ರದೇಹಿ ಮಠ ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.ಮಂದಳ ರಾಜರಾಗಿರುವ ಶಶಿಕುಮಾರ್ ವರ್ಮಾ ಅವರ ಧರ್ಮಪತ್ನಿ ಶ್ರೀ ಕ್ಷೇತ್ರ ಶಬರಿಮಲೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ದ.ಕ. ಜಿಲ್ಲೆಯ ಅಧ್ಯಕ್ಷ ಗಣೇಶ್ ಪೊದುವಾಳ್, ಶಾಸಕ ಹರೀಶ್ ಪೂಂಜ, ಎಂಎಲ್ಲಿಗಳಾದ ಹರೀಶ್ ಕುಮಾರ್ ಹಾಗೂ ಪ್ರತಾಪಸಿಂಹ ನಾಯಕ್, ಉದ್ಯಮಿ ಶಶಿಧರ ಬಿ. ಶೆಟ್ಟಿ ನವಶಕ್ತಿ ಬರೋಡ, ಪ್ರಾಂತ ಸಹ ಕಾರವಾಹ ಪ್ರಕಾಶ್ ಪಿ.ಎಸ್., ಗ್ರಾ.ಪಂ. ಅಧ್ಯಕ್ಷೆ ಸುನಂದ, ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷ ಹರೀಶ್ ಸಾಲಿಯನ್, ಸಿ ಎ ಬ್ಯಾಂಕ್ ಬಂಗಾಡಿ ನಿರ್ದೇಶಕ ಎ.ಬಿ. ಉಮೇಶ್ ಅತೃಡ್ಕ ಭಾಗವಹಿಸಲಿದ್ದಾರೆ.

ಬೆಳಗ್ಗೆ 7.30ಕ್ಕೆ ಗಣಹೋಮ, ಮಧ್ಯಾಹ್ನ 12.00ಕ್ಕೆ ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.ರಾತ್ರಿ ಗಂಟೆ 9.30ರಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಮುಲ್ಕಿ ಇವರಿಂದ ‘ಶಿವದೂತೆ ಗುಳಿಗೆ” ತುಳು ಯಕ್ಷಗಾನ ಬಯಲಾಟ ನಡೆಯಲಿದೆ.

ಡಿ.28ರಂದು ಬೆಳಿಗ್ಗೆ 3.00ಗಂಟೆಗೆ ದೇವಿದರ್ಶನ, 4 ಗಂಟೆಗೆ ಆಗ್ನಿ ಸೇವೆ ನಡೆಯಲಿದೆ. ಬೆಳಿಗ್ಗೆ 6 ಗಂಟೆಗೆ ಮಹಾಪೂಜೆ ಪ್ರಸಾದ ವಿತರಣೆ ಜರುಗಲಿದೆ.

Exit mobile version