ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಗೆ ತೆರೆ- ಕ್ರಮ ಕೈಗೊಳ್ಳುವ ಭರವಸೆ ನೀಡಿದ ತಾ.ಪಂ.ವ್ಯವಸ್ಥಾಪಕ ಪ್ರಶಾಂತ್

0

ಕೊಕ್ಕಡ: ಕೊಕ್ಕಡ ಗ್ರಾಮ‌ ಪಂಚಾಯತ್ ನಲ್ಲಿ ಪಿಡಿಒ ದೀಪಕ್ ಅವರು ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಗೃಹಲಕ್ಷಿ ಯೋಜನೆಯ ಅಭಿಯಾನದ ಕುರಿತು ಮಾಹಿತಿ ನೀಡದೆ ಅಭಿಯಾನ ನಡೆಸುತ್ತಿದ್ದಾರೆ ಎಂದು ಗ್ರಾಮ ಪಂಚಾಯತ್ ಕಚೇರಿ ಎದುರು ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ನಡೆಸುತ್ತಿದ್ದ ಪ್ರತಿಭಟನೆಗೆ ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್ ತೆರೆ ಎಳೆದಿದ್ದಾರೆ.

ಪಿಡಿಓ ದೀಪಕ್ ಮತ್ತು ಕಾರ್ಯದರ್ಶಿ ಭಾರತಿ ವಿರುದ್ಧ ಶೋಕಾಸ್ ನೋಟಿಸ್ ನೀಡಲಾಗುವುದು ಹಾಗೂ ಇಓ ಜೊತೆಗೂಡಿ ಸಭೆ ನಡೆಸಿ ಕ್ರಮ‌ಕೈಗೊಳ್ಳುವುದಾಗಿ ಪ್ರಶಾಂತ್ ಭರವಸೆ ನೀಡಿದ್ದಾರೆ.

ಈ ಸಂದರ್ಭ ಪಿಡಿಓ ದೀಪಕ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್ ಅವರಿಗೆ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here