Site icon Suddi Belthangady

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ಜಾತ್ರಾ ಮಹೋತ್ಸವ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ‌ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿಯ ಪ್ರಥಮ ವರ್ಷದ ಜಾತ್ರಾಮಹೋತ್ಸವ ಕ್ಷೇತ್ರದ ತಂತ್ರಿಗಳಾದ ನಿಲೇಶ್ವರ ವೇದಮೂರ್ತಿ ಶ್ರೀ ಪದ್ಮನಾಭ ತಂತ್ರಿಗಳಾದ ನೇತ್ರತ್ವದಲ್ಲಿ ಡಿ.28 ರಿಂದ ಜ.1 ರವರೆಗೆ ಜರಗಲಿದ್ದು ಇದರ ಪ್ರಯುಕ್ತ ಊರ ಭಕ್ತಾಧಿಗಳಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ ತೋರಣ ಮಹೂರ್ತ ದ್ವಜರೋಹಣ ಡಿ.28 ರಂದು ಜರಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ‌ ಅರ್ಚಕ ಪ್ರಸನ್ನ ಭಟ್, ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಯುವ ಸಮಿತಿಯ ಅಧ್ಯಕ್ಷ ನಿತೇಶ್ ಕುಮಾರ್, ಕಾರ್ಯದರ್ಶಿ ಸುದೀಪ್ ಶೆಟ್ಟಿ, ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು, ಭಜನಾ ಮಂಡಳಿ ಅಧ್ಯಕ್ಷ ಯೋಗಿಶ್ ಕೊಡಂಗೆ, ದೇವಸ್ಥಾನದ ಟ್ರಸ್ಟಿನ ಸದಸ್ಯರು ಮೋಹನ್ ಭಟ್ ಮೈರಾರು, ವಾಮನ ಮೂಲ್ಯ ಮಡಂತಿಲ, ದೇವಿಪ್ರಸಾದ್ ಮೂಲೋಟ್ಟು, ಮೀನಾಕ್ಷಿ ಮೈರಲ್ಕೆ, ಗುರುರಾಜ್ ಪೊಡುಂಬ, ಸತೀಶ್ ಮೈರಲ್ಕೆ ಮತ್ತಿತರರು ಉಪಸ್ಥಿತರಿದ್ದರು.

Exit mobile version