ಧರ್ಮಸ್ಥಳ ಶ್ರೀ ಧ.ಮಂ.ಆಂ.ಮಾ.ಶಾಲೆಯಲ್ಲಿ ಮಾದಕ ವ್ಯಸನದ ಬಗ್ಗೆ ಜಾಗೃತಿ ಕಾರ್ಯಕ್ರಮ

0

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಮಾದಕ ವ್ಯಸನದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅನನ್ಯ ಲಕ್ಷ್ಮಿ ಸಂದೀಪ್ ಮಾದಕ ವ್ಯಸನಗಳು ಅಂದರೆ ಏನು? ಅದರಿಂದಾಗುವ ಪರಿಣಾಮಗಳೇನು? ವಿದ್ಯಾರ್ಥಿಗಳು ಹೇಗೆ ಎಚ್ಚೆತ್ತುಕೊಳ್ಳಬೇಕು ಹೇಗೆ ತಮ್ಮ ಭವಿಷ್ಯವನ್ನು ಜತನದಿಂದ ಕಾಯ್ದುಕೊಳ್ಳಬೇಕು ತಿಂಡಿ ಇತ್ಯಾದಿ ಹತ್ತು ಹಲವು ವಿಚಾರಗಳನ್ನು ಕಥೆ ಹಾಸ್ಯ ಹಾಗೂ ವಿವಿಧ ಚಟುವಟಿಕೆಗಳ ಮುಖಾಂತರ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.

ಶಾಲಾ ವಿದ್ಯಾರ್ಥಿನಿ ಕುಮಾರಿ ಕ್ಷಮಾ ಇವರು ನಿರ್ವಹಿಸಿದ ಕಾರ್ಯಕ್ರಮದಲ್ಲಿ , ಸುಘೋಷ್ ಸ್ವಾಗತಿಸಿ, ಕುಮಾರಿ ವಂಶಿಕ ವಂದಿಸಿದರು.

ಶಾಲಾ ಮುಖ್ಯೋಪಾಧ್ಯಾಯನಿ ಪರಿಮಳ ಎಂ ವಿ ಇವರ ಮಾರ್ಗದರ್ಶನದಲ್ಲಿ ಮೂಡಿ ಬಂದ ಈ ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಾಕ್ಷಿಗಳಾದರು.

LEAVE A REPLY

Please enter your comment!
Please enter your name here