ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಮೃದ್ಧಿ ಸಭಾಭವನ ಲೋಕಾರ್ಪಣೆ

0

ಪಡಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಮೃದ್ಧಿ ಸಭಾಭವನವನ್ನು ಶಾಸಕ ಹರೀಶ್ ಪೂಂಜ ಲೋಕಾರ್ಪಣೆಗೊಳಿಸಿ, ಬಳಿಕ ಸಭಾಭವನದ ನಾಮಫಲಕವನ್ನು ಡಿ.30 ರಂದು ಸಂಘದ ಆವರಣದಲ್ಲಿ ಅನಾವರಣಗೊಳಿಸಿದರು.

ಗೋದಾಮು ಕಟ್ಟಡವನ್ನು ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಉದ್ಘಾಟಿಸಿದರು.ಲಿಫ್ಟ್ ಗೆ ಪೇರಡ್ಕ ಸದಾಶಿವ ದೇವಸ್ಥಾನದ ಆಡಳಿತ ಮೊಕ್ತೇಸರ ಉದಯ ಮಂಜಿತ್ತಾಯ ಚಾಲನೆ ನೀಡಿದರು.ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು.ಬದ್ಯಾರು ಚರ್ಚ್ ನ ಧರ್ಮಗುರು ರೆ.ಫಾ‌. ಮೆಲ್ವಿನ್ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಡಂಗಡಿ ಗ್ರಾ.ಪಂ.ಅಧ್ಯಕ್ಷ ವಸಂತ ಪೂಜಾರಿ, ಪಡಂಗಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಜೈನ್, ಸಂಘದ ಉಪಾಧ್ಯಕ್ಷ ನರೇಂದ್ರ ಕುಮಾರ್‌‌, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುಕೇಶಿನಿ, ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮ, ನಿರ್ದೇಶಕರುಗಳಾದ ನಾರಾಯಣ ಮೂಲ್ಯ, ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ, ರಾಮು, ಪದ್ಮನಾಭ ನಾಯ್ಕ, ಕೃಷ್ಣಪ್ಪ ಪೂಜಾರಿ, ಉಮೇಶ, ಉಷಾ, ಸುನಂದ, ನವೀನ್, ಪಡಂಗಡಿ ಮೊಹಿದ್ದಿನ್ ಜಮ್ಮಾ ಮಸೀದಿಯ ಖತೀಬರು ಎ.ಆರ್ ದಾರಿಮಿ, ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಮ್ಯಾಕ್ಸಿ ಸ್ವಿಕ್ವೇರಾ, ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಹಾಗೂ ತೆಕ್ಕಾರು ಸಿಎ ಬ್ಯಾಂಕ್ ಅಧ್ಯಕ್ಷ ಬಿ.ಅಬ್ದುಲ್ ರಝಾಕ್, ತಾಲೂಕಿನ ಹಲವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಕಾಧಿಕರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here