ಮುಂಡಾಜೆ: ಇಸ್ಮಾಯಿಲ್ ಹಾಜಿ ಮೂಲೆ (ಮೂಲೆ ಮೋನು ಹಾಜಿ) ನಿಧನ

0

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಅರೆಕ್ಕಲ್ ನಿವಾಸಿ, ಹಿರಿಯ ಕೃಷಿಕ ಹಾಗೂ ಅಡಿಕೆ ವ್ಯಾಪಾರಿ ಇಸ್ಮಾಯಿಲ್ ಹಾಜಿ ಮೂಲೆ (ಮೂಲೆ ಮೋನು ಹಾಜಿ) ಅವರು ಅಲ್ಪ ಕಾಲದ ಅಸೌಖ್ಯದಿಂದ ಡಿ.30 ರಂದು ನಿಧನರಾಗಿದ್ದಾರೆ‌.

ಮೂಲತಃ ಮಂಗಳೂರು ತಾಲೂಕು ಕೊಣಾಜೆ ಸನಿಹದ ನಡುಪದವು ಮೂಲೆ ನಿವಾಸಿಯಾಗಿರುವ ಅವರು ಅಲ್ಲಿನ ಅಲ್ ಉಮರ್ ಜುಮ್ಮಾ ಮಸೀದಿ ನಡುಪದವು ಕೈರಂಗಳ ಜಮಾಅತಿನ ಮಾಜಿ ಅಧ್ಯಕ್ಷರೂ ಹಿರಿಯ ಸಾಮಾಜಿಕ ಮುಂದಾಳುವೂ ಆಗಿದ್ದರು.ಊರಿನಲ್ಲಿ ಅವರು ಮೂಲೆ ಮೋನು ಹಾಜಿ ಎಂದೇ ಅರಿಯಲ್ಪಡುತ್ತಿದ್ದರು. ನಡುಪದವು ಸರಕಾರಿ ಶಾಲೆಗೆ ಜಾಗ ಮಂಜೂರಾತಿ ಹಾಗೂ ಕಟ್ಟಡ ರಚನೆಗಾಗಿ ಹೋರಾಟ ಮಾಡಿ‌ ಯಶಸ್ವಿ ಯಾಗಿದ್ದರು. ಅವರ‌ ನಿಧನ‌ದ ಗೌರವಾರ್ಥ ಶಾಲೆಗೆ ರಜೆ ಸಾರಿ ಶೋಕ ಆಚರಿಸಲಾಯಿತು.

ಮೃತರು ಪತ್ನಿ ಐಸಮ್ಮ, ಮಕ್ಕಳಾದ ಹಮೀದ್,‌ ಮುಹಮ್ಮದ್, ಕಾಸಿಂ ಮತ್ತು ಏಕೈಕ ಪುತ್ರಿ ಪುತ್ತುಮ್ಮ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಮೃತರ ಮನೆಗೆ ಕರ್ನಾಟಕ ವಿಧಾನ ಸಭೆಯ ಸಭಾಪತಿ ಯು.ಟಿ ಖಾದರ್ ಸಹಿತ ಅನೇಕ ಗಣ್ಯರು ಭೇಟಿ ಮಾಡಿ ಅಂತಿಮ ದರ್ಶನ ಪಡೆದು ಮನೆಯವರಗೆ ಸಾಂತ್ವಾನ ಹೇಳಿದರು.

LEAVE A REPLY

Please enter your comment!
Please enter your name here